ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

Ad
Ad

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

Ad
Ad

ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ ‘ಚಿನ್ನದ ಪದಕ’ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ ‘ಗೋಲ್ಡ್ ಮೆಡಲ್’ ನ ಸಾಧನೆ ತಂದಿದ್ದಾರೆ.

ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

ಸದ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.

”ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ ‘ಚಿನ್ನದ ಪದಕ’ ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ ಎಂದಿದ್ದಾರೆ ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

“ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ‌ ಎಂದಿದ್ದಾರೆ‌ ಡಾ. ಬಿ.ಟಿ ಮುದ್ದೇಶ. (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು