ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ ‘ಚಿನ್ನದ ಪದಕ’ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ ‘ಗೋಲ್ಡ್ ಮೆಡಲ್’ ನ ಸಾಧನೆ ತಂದಿದ್ದಾರೆ.

ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

ಸದ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.

”ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ ‘ಚಿನ್ನದ ಪದಕ’ ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ ಎಂದಿದ್ದಾರೆ ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

“ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ‌ ಎಂದಿದ್ದಾರೆ‌ ಡಾ. ಬಿ.ಟಿ ಮುದ್ದೇಶ. (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ