ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ ‘ಚಿನ್ನದ ಪದಕ’ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ ‘ಗೋಲ್ಡ್ ಮೆಡಲ್’ ನ ಸಾಧನೆ ತಂದಿದ್ದಾರೆ.

ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

ಸದ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.

”ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ ‘ಚಿನ್ನದ ಪದಕ’ ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ ಎಂದಿದ್ದಾರೆ ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

“ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ‌ ಎಂದಿದ್ದಾರೆ‌ ಡಾ. ಬಿ.ಟಿ ಮುದ್ದೇಶ. (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ