Good news: This is a golden opportunity for farmers

Good news: ರೈತರಿಗೆ ಇದು ಸುವರ್ಣ ಅವಕಾಶ

Good news: ರೈತರಿಗೆ ಇದು ಸುವರ್ಣ ಅವಕಾಶ

ಬೆಂಗಳೂರು: ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ಗಂಗಾ ಕಲ್ಯಾಣ ಯೋಜನೆಯ (Ganga kalyana scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.

Join Our Telegram: https://t.me/dcgkannada

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ಸಿಗುತ್ತದೆ.

ಒಟ್ಟು 4 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಈ ಯೋಜನೆ ಅಡಿ ಪಡೆಯಬಹುದಾಗಿದೆ.

ಯಾವೆಲ್ಲ ರೈತರು ಅರ್ಹರು?

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ವ್ಯವಸಾಯ ನಿರತರಾಗಿಬೇಕು. ಕನಿಷ್ಠ 02 ಎಕರೆ ಜಮೀನನ್ನು ಹೊಂದಿರಲೇಬೇಕು.

ಈ ಹಿಂದೆ ನೀರಾವರಿ ಸೌಲಭ್ಯ ಪಡೆದಿರಬಾರದು. ಈಗಾಗಲೇ ನೀರಾವರಿ ಜಮೀನು ಹೊಂದಿರಬಾರದು. ಕನಿಷ್ಠ 18 ರಿಂದ ಗರಿಷ್ಠ 60 ವರ್ಷದೊಳಗಿರಬೇಕು. ಆದಾಯದ ಮಿತಿ ವಾರ್ಷಿಕವಾಗಿ ಗ್ರಾಮೀಣ ಪ್ರದೇಶವಾದರೆ 98 ಸಾವಿರ ರೂಪಾಯಿ, ನಗರ ಪ್ರದೇಶವಾದರೆ 1.20 ಲಕ್ಷ ರೂಪಾಯಿ ಒಳಗಿರಬೇಕು.

ಏನೆಲ್ಲ ದಾಖಲೆ ಇರಬೇಕು?

ಜಾತಿ ಪ್ರಮಾಣಪತ್ರ, ಸಣ್ಣ ಹಿಡುವಳಿದಾರರ ಪ್ರಮಾಣಪತ್ರ, ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಅರ್ಜಿದಾರರ ಭಾವಚಿತ್ರ ಹೊಂದಿರಬೇಕು.

ಇದನ್ನೂ ಓದಿ: Astrology: ಇವರಿಗೆ ಇಂದು ಭರ್ಜರಿ ರಾಜಕೀಯ ಯೋಗ!

ಅರ್ಜಿ ಹಾಕಲು ಬಯಸುವವರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು