ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಮಾದಿಗ ಮತ್ತು ಸಂಬoಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುದ್ದೇಬಿಹಾಳ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮಾದಿಗ ಮತ್ತು ಸಂಬAಧಿತ ಉಪಜಾತಿಗಳ ಸಂಘಟನೆಗಳ ಪದಾಧಿಕಾರಿಗಳು, ದಲಿತಪರ ಸಂಘಟನೆ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೆಲವೆಡೆ ಅರ್ಧಮರ್ಧ ತೆರೆದಿದ್ದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲು ಸಂಘಟನೆಯವರು ತಿಳಿ ಹೇಳಿ ಪ್ರತಿಭಟನೆ ನಡೆಸಿದರು.

ಸಮಾಜದ ಮುಖಂಡ ಬಸವರಾಜ ಪೂಜಾರಿ(ಸಿದ್ದಾಪೂರ ಪಿ.ಟಿ) ಮಾತನಾಡಿ, ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿ ಪ್ರಕ್ರಿಯೆ ಮುಂದುವರಿಸುವ ಸರ್ಕಾರದ ನಡೆ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ಉಂಟುಮಾಡುತ್ತಿದೆ.ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದ ಹಿನ್ನೆಲೆ ರಾಜ್ಯ ಸರ್ಕಾರ ಕಾಯ್ದೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆದಿರುವುದು ಮಾದಿಗ ಸಮುದಾಯದ ಸುಮಾರು 35 ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ಜಯವಾಗಿದೆ. ಆದರೂ ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿ ನಡೆಸಲು ಸರ್ಕಾರ ಮುಂದಾಗಿರುವುದು ಮಾದಿಗ ಮತ್ತು ಸಂಬoಧಿತ ಜಾತಿಗಳಿಗೆ ಅನ್ಯಾಯವನ್ನುಂಟು ಮಾಡುವ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರಾದ ಕೆ.ಬಿ.ದೊಡಮನಿ ಮಾತನಾಡಿ, ಸರ್ಕಾರ ಫೆ.27 ರಂದು ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆದು, ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ಶಿಫಾರಸ್ಸಿನಂತೆ ಮಾದಿಗ ಮತ್ತು ಸಂಬoಧಿತ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಅಂಬೇಡ್ಕರ್ ಸರ್ಕಲ್‌ಗೆ ಆಗಮಿಸಿದ ಪ್ರತಿಭಟನಾಕಾರರನ್ನು ಭೇಟಿಯಾದ ತಹಶೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಸಾವಿರಾರು ಹುದ್ದೆಗಳನ್ನು ಒಳ ಮೀಸಲಾತಿ ಆಧಾರದಲ್ಲಿ ಭರ್ತಿ ಮಾಡಬೇಕು.ಸರ್ಕಾರ ತಕ್ಷಣ ಸ್ಪಂದಿಸಿ ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಮುದ್ದೇಬಿಹಾಳ ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರ್ ಸ್ಥಗಿತಗೊಂಡಿತ್ತು.ಪಟ್ಟಣದ ಎಲ್ಲಾ ವ್ಯಾಪಾರಸ್ಥರ ಅಂಗಡಿ-ಮುಗ್ಗಟ್ಟುಗಳು ಬಂದ್ ಆಗಿದ್ದು, ವ್ಯಾಪಾರ ವ್ಯವಹಾರಗಳು ಸ್ಥಗಿತಗೊಂಡಿದ್ದವು.ಸಿಪಿಐ ಮೊಹ್ಮದಫಸಿವುದ್ದೀನ್ ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಬೀಡು ಬಿಟ್ಟು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ನಿವಾಸಕ್ಕೂ ಪೊಲೀಸ್ ಭದ್ರತೆ ನೀಡಲಾಗಿತ್ತು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ತಿಪ್ಪಣ್ಣ ದೊಡಮನಿ, ಬಾಲಚಂದ್ರ ಹುಲ್ಲೂರ,ಸುಭಾಸ ಕಟ್ಟಿಮನಿ(ಕಾಳಗಿ), ಮುತ್ತಪ್ಪ ಪೂಜಾರಿ, ಮಾರುತಿ ಸಿದ್ದಾಪೂರ, ಆನಂದ ಮುದೂರ, ಭೀಮರಾಯ ಹುಲ್ಲೂರ, ಕೆ ಬಿ ದೊಡಮನಿ,ರವಿ ಬಸರಕೋಡ,ಪರಶುರಾಮ ಶಿಂಧೆ, ಮಾಹಾಂತೇಶ ಕಂದಗನೂರ, ಹುಲಗೆಪ್ಪ ನಾಗರಬೆಟ್ಟ, ಶ್ರೀಧರ ಹಳ್ಳೂರ, ಬಸವರಾಜ ನಾಗರಬೆಟ್ಟ ಸೇರಿದಂತೆ ತಾಲ್ಲೂಕಿನಿಂದ ಆಗಮಿಸಿದ್ದ ದಲಿತಪರ ಸಂಘಟನೆ ಹೋರಾಟಗಾರರು ಪಾಲ್ಗೊಂಡಿದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ