Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐ ಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ (Got banjara) ಹಮ್ಮಿಕೊಳ್ಳಲಾಗಿತ್ತು.

ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ..

ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

Join Out Telegram: https://t.me/dcgkannada

ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೂಡ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಭೂಕೇನ ಬಾಟಿ ಖರಾಯೇರೋ,
ತರಸೇನ ಪಾಣಿ ಪರಾಯೇರೋ ,
ಬೋಲಾಡಿ ಪಡಮೇಲೋಜೆನ ವಾಟ ವತಾಯೇರೋ ,
ಆಶ್ರೋ ಚೇಯಿಜೇನ ಆಶ್ರೋ ದೇರೋ.

ಅರ್ಥ – ಹಸುವಿನಲ್ಲಿ ಇರುವನಿಗೆ ಊಟ ಬಡಿಸಿ, ನೀರು ಧಣಿದು ಬಂದವರಿಗೆ ನೀರು ಕೊಡಿ, ಜೀವನದಲ್ಲಿ ದಾರಿ ತಪ್ಪಿದವರಿಗೆ ಸರಿಯಾದ ದಾರಿ ಮಾರ್ಗ ತೋರಿಸಿ, ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಸಹಾಯ ಮಾಡಿ. ಎಂದು ಸದ್ಗುರು ಸೇವಾಲಾಲ್ ಮಾಹಾರಾಜ್ ಹೇಳಿದ್ದಾರೆ ಎಂದು ತಿಳಿಸಿದರು.

ಹಾಗೆ ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಗೋರ್ ಸಮಾಜದ ಯೋಧರ ಬಗ್ಗೆ ನಮ್ಮ ಇತಿಹಾಸ ಪುಟದಲ್ಲಿ ಎಲ್ಲಿಯೂ ಕಾಣದಂತೆ ಮರೆಮಾಚಿಸಿದ್ದಾರೆ. ನೋವಿನ ವಿಷಯವೇನೆಂದರೆ ಬ್ರಿಟಿಷರ ಜೊತೆ ಮೊದಲ ಬಾರಿಗೆ ಗೋರ್ ಸಮಾಜದವತಿಯಿಂದ (ಟ್ಯಾಕ್ಸ್) ತೆರಿಗೆ ವಿಚಾರವಾಗಿ ಧ್ವನಿಯೆತ್ತಿದ ವೀರರ ಹೆಸರು ಎಲ್ಲಿಯೂ ಕಾಣದಂತಾಗಿದೆ.. ಅದೇನಪ್ಪ ಅಂದರೆ ಮೊದಲ ಬಾರಿಗೆ “ಮಾರೋ ತಾಂಡೋ ಮಾರೋ ರಾಜ್ ” ಎಂಬ ಧ್ವನಿಯನ್ನು ಎತ್ತಿದ ಮೊದಲ ನಾಯಕನೇ ಸದ್ಗುರು ಸೇವಾಲಾಲ್ ಮಾಹಾರಾಜ್.
ಅಂದರೆ ನಾವು ಯಾಕೆ ತೆರಿಗೆ ಕಟ್ಟಬೇಕು (ಟ್ಯಾಕ್ಸನ್ನ). ನನ್ನ ಊರು ನನ್ನ ಭೂಮಿ ನಿಮಗೇಕೆ ಕಟ್ಟಬೇಕು ತೆರಿಗೆ (ಟ್ಯಾಕ್ಸ್) ಎಂದು ಧ್ವನಿಯೆತ್ತಿದರು.

ಇಂಥ ವೀರಯೋಧನ ಬಗ್ಗೆ ಇತಿಹಾಸದಲ್ಲಿ ಹೆಸರು ಇಲ್ಲದಂತಾಗಿದೆ . ಹೀಗಿದ್ದಲ್ಲಿ ನಾಳೆ ನಾವು ಇದ್ದರೂ ಸತ್ತಂತಾಗುತ್ತದೆ. ಸಮಾಜದ ಅಳಿವಿನ ಅಂಚಿನಲ್ಲಿದೆ ಎಂದು ಗೋರ್ ಸೇನಾ ಸಂಘಟನೆವತಿಯಿಂದ ತಿಳಿಸಿದರು.

ಕೋರೆ ಗೋರೇನ ಸಾಯಿವೇಸ್ ,
ಜೀವ ಜನಗಾನಿನ ಸಾಯಿವೇಸ್,
ಖುಟ ಮುಂಗರೀನ್ ಸಾಯಿವೇಸ,

ಈ ಭೂಮಿ ಮೇಲಿರುವ ಜನಾಂಗಕ್ಕೆ ಹಾಗೂ ಗೋರ್ ಸಮಾಜದ ಜನಾಂಗದವರಿಗೂ ಲೆಸನ್ನು ಬಯರುವುದು , ಪ್ರಕೃತಿಯಲ್ಲಿ ಇರುವ ಜೀವಿಸುತ್ತಿರುವ ಎಲ್ಲಾ ಜೀವ ರಾಶಿಗಳಿಗೂ ಹಾಗೂ ನಿರ್ಜಿವ ವಸ್ತುವಿಗೂ ಲೆಸನ್ನು ಬಯರುವುದು. ಎಂದು ವಿನಂತಿ ಮಾಡಿಕೊಳ್ಳುತ್ತಾರೆ.

ಅದರ ಜೊತೆಯಲ್ಲಿ ಅರ್ಥಗರ್ಭಿತವಾದ ಒಂದು ಗೋಲಾದ ವೃತ್ತವನ್ನು ( ಚೋಕೋ ) ತೆಗೆದು ಅದರ ಮಧ್ಯದಲ್ಲಿ ನಾಲ್ಕು ದಿಕ್ಕುಗಳಂತೆ ತೋರಿಸಿ, ಮಧ್ಯದಲ್ಲಿ ಒಂದು ಕಳಸ ಅದರಲ್ಲಿ 75ರಷ್ಟು ನೀರಿನ ಪ್ರಮಾಣ ಹಾಕಿ ಅದರ ಕಳಸದ ಒಳಗಡೆ ಬೇವಿನ ಎಲೆಯನ್ನು ಹಾಕುತ್ತಾರೆ.. ಇದರ ಅರ್ಥ 3ಸಾವಿರ – 4 ಸಾವಿರ ವರ್ಷಗಳ ಹಿಂದೆ ನಮ್ಮ ಪೂರ್ವಜರು ನಮಗೆ ತಿಳಿಸಿ ಹೋದರು ಇನ್ನುವರೆಗೂ ಇದರ ಬಗ್ಗೆ ಅರ್ಥವಾಗಿಲ್ಲ ಅದೇನಪ್ಪ ಅಂದರೆ ಭೂಮಿಯು ಗೋಲಾಕಾರವಾಗಿದೆ, ಭೂಮಿಯ ಮೇಲಿನ 75ರಷ್ಟು ನೀರಿನ ಅಂಶವಿದೆ , ಹಾಗೆ ಹಚ್ಚು ಹಸುರು ಪ್ರಕೃತಿ ಸಂಕೇತವನ್ನು ಸುಚಿಸುತ್ತದೆ ಎಂಬ ಅರ್ಥವನ್ನು ನೀಡುತ್ತದೆ. ಹೀಗೆ ನಮ್ಮ ಪೂರ್ವಜರು ಭೂಮಿಯ ಆಕಾರದ ಬಗ್ಗೆ ತಿಳಿಸಿದರು . ಆದರೆ ನಾವುಗಳು ಅದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವೇವಾಗಲಿಲ್ಲ.. ಹೀಗಿರುವಾಗ ನಮ್ಮ ಸಮಾಜವನ್ನು ಯಾವ ರೀತಿ ರಕ್ಷಣೆ ಮಾಡಬೇಕು, ಹಾಗೆ ಯಾವ ರೀತಿ ನಮ್ಮ ಪೂರ್ವಜರು ವೈಜ್ಞಾನಿಕ ವಿಚಾರವನ್ನು ಹೊಂದಿದ್ದರು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಿಳಿ ಪಡಿಸಿದರು.

ಇದೇ ಸಂದರ್ಭದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ, ಗೋರ್ ಸೇನಾ
ಸಂಘಟನೆ ವತಿಯಿಂದ ನಾರಾಯಣಪುರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಶೇಖರ್ ರಾಠೋಡ ಅವರಿಗೆ ಸನ್ಮಾನ ಹಮ್ಮಿಕೊಂಡಿದ್ದರು ಮತ್ತು ಅದರ ಜೊತೆಯಲ್ಲಿ ಚಂದು ಹರಾವತ್ ಪೊಲೀಸ್ ಇವರಿಗೂ ಸಹ ಸನ್ಮಾನವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಗೋರ್ ಸೇನಾ ಸಂಘಟನೆಯ ಕರ್ನಾಟಕ ಜೊತೆ ಹುಣಸಗಿ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು, ಗುರುಹಿರಿಯರು ಇದ್ದರು.

Latest News

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಮುಖಂಡ ಅಶೋಕ ಭೋವಿ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತೆ ಮಾರಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಆವರಣದಲ್ಲಿ