Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐ ಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ (Got banjara) ಹಮ್ಮಿಕೊಳ್ಳಲಾಗಿತ್ತು.

ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ..

ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

Join Out Telegram: https://t.me/dcgkannada

ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೂಡ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಭೂಕೇನ ಬಾಟಿ ಖರಾಯೇರೋ,
ತರಸೇನ ಪಾಣಿ ಪರಾಯೇರೋ ,
ಬೋಲಾಡಿ ಪಡಮೇಲೋಜೆನ ವಾಟ ವತಾಯೇರೋ ,
ಆಶ್ರೋ ಚೇಯಿಜೇನ ಆಶ್ರೋ ದೇರೋ.

ಅರ್ಥ – ಹಸುವಿನಲ್ಲಿ ಇರುವನಿಗೆ ಊಟ ಬಡಿಸಿ, ನೀರು ಧಣಿದು ಬಂದವರಿಗೆ ನೀರು ಕೊಡಿ, ಜೀವನದಲ್ಲಿ ದಾರಿ ತಪ್ಪಿದವರಿಗೆ ಸರಿಯಾದ ದಾರಿ ಮಾರ್ಗ ತೋರಿಸಿ, ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಸಹಾಯ ಮಾಡಿ. ಎಂದು ಸದ್ಗುರು ಸೇವಾಲಾಲ್ ಮಾಹಾರಾಜ್ ಹೇಳಿದ್ದಾರೆ ಎಂದು ತಿಳಿಸಿದರು.

ಹಾಗೆ ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಗೋರ್ ಸಮಾಜದ ಯೋಧರ ಬಗ್ಗೆ ನಮ್ಮ ಇತಿಹಾಸ ಪುಟದಲ್ಲಿ ಎಲ್ಲಿಯೂ ಕಾಣದಂತೆ ಮರೆಮಾಚಿಸಿದ್ದಾರೆ. ನೋವಿನ ವಿಷಯವೇನೆಂದರೆ ಬ್ರಿಟಿಷರ ಜೊತೆ ಮೊದಲ ಬಾರಿಗೆ ಗೋರ್ ಸಮಾಜದವತಿಯಿಂದ (ಟ್ಯಾಕ್ಸ್) ತೆರಿಗೆ ವಿಚಾರವಾಗಿ ಧ್ವನಿಯೆತ್ತಿದ ವೀರರ ಹೆಸರು ಎಲ್ಲಿಯೂ ಕಾಣದಂತಾಗಿದೆ.. ಅದೇನಪ್ಪ ಅಂದರೆ ಮೊದಲ ಬಾರಿಗೆ “ಮಾರೋ ತಾಂಡೋ ಮಾರೋ ರಾಜ್ ” ಎಂಬ ಧ್ವನಿಯನ್ನು ಎತ್ತಿದ ಮೊದಲ ನಾಯಕನೇ ಸದ್ಗುರು ಸೇವಾಲಾಲ್ ಮಾಹಾರಾಜ್.
ಅಂದರೆ ನಾವು ಯಾಕೆ ತೆರಿಗೆ ಕಟ್ಟಬೇಕು (ಟ್ಯಾಕ್ಸನ್ನ). ನನ್ನ ಊರು ನನ್ನ ಭೂಮಿ ನಿಮಗೇಕೆ ಕಟ್ಟಬೇಕು ತೆರಿಗೆ (ಟ್ಯಾಕ್ಸ್) ಎಂದು ಧ್ವನಿಯೆತ್ತಿದರು.

ಇಂಥ ವೀರಯೋಧನ ಬಗ್ಗೆ ಇತಿಹಾಸದಲ್ಲಿ ಹೆಸರು ಇಲ್ಲದಂತಾಗಿದೆ . ಹೀಗಿದ್ದಲ್ಲಿ ನಾಳೆ ನಾವು ಇದ್ದರೂ ಸತ್ತಂತಾಗುತ್ತದೆ. ಸಮಾಜದ ಅಳಿವಿನ ಅಂಚಿನಲ್ಲಿದೆ ಎಂದು ಗೋರ್ ಸೇನಾ ಸಂಘಟನೆವತಿಯಿಂದ ತಿಳಿಸಿದರು.

ಕೋರೆ ಗೋರೇನ ಸಾಯಿವೇಸ್ ,
ಜೀವ ಜನಗಾನಿನ ಸಾಯಿವೇಸ್,
ಖುಟ ಮುಂಗರೀನ್ ಸಾಯಿವೇಸ,

ಈ ಭೂಮಿ ಮೇಲಿರುವ ಜನಾಂಗಕ್ಕೆ ಹಾಗೂ ಗೋರ್ ಸಮಾಜದ ಜನಾಂಗದವರಿಗೂ ಲೆಸನ್ನು ಬಯರುವುದು , ಪ್ರಕೃತಿಯಲ್ಲಿ ಇರುವ ಜೀವಿಸುತ್ತಿರುವ ಎಲ್ಲಾ ಜೀವ ರಾಶಿಗಳಿಗೂ ಹಾಗೂ ನಿರ್ಜಿವ ವಸ್ತುವಿಗೂ ಲೆಸನ್ನು ಬಯರುವುದು. ಎಂದು ವಿನಂತಿ ಮಾಡಿಕೊಳ್ಳುತ್ತಾರೆ.

ಅದರ ಜೊತೆಯಲ್ಲಿ ಅರ್ಥಗರ್ಭಿತವಾದ ಒಂದು ಗೋಲಾದ ವೃತ್ತವನ್ನು ( ಚೋಕೋ ) ತೆಗೆದು ಅದರ ಮಧ್ಯದಲ್ಲಿ ನಾಲ್ಕು ದಿಕ್ಕುಗಳಂತೆ ತೋರಿಸಿ, ಮಧ್ಯದಲ್ಲಿ ಒಂದು ಕಳಸ ಅದರಲ್ಲಿ 75ರಷ್ಟು ನೀರಿನ ಪ್ರಮಾಣ ಹಾಕಿ ಅದರ ಕಳಸದ ಒಳಗಡೆ ಬೇವಿನ ಎಲೆಯನ್ನು ಹಾಕುತ್ತಾರೆ.. ಇದರ ಅರ್ಥ 3ಸಾವಿರ – 4 ಸಾವಿರ ವರ್ಷಗಳ ಹಿಂದೆ ನಮ್ಮ ಪೂರ್ವಜರು ನಮಗೆ ತಿಳಿಸಿ ಹೋದರು ಇನ್ನುವರೆಗೂ ಇದರ ಬಗ್ಗೆ ಅರ್ಥವಾಗಿಲ್ಲ ಅದೇನಪ್ಪ ಅಂದರೆ ಭೂಮಿಯು ಗೋಲಾಕಾರವಾಗಿದೆ, ಭೂಮಿಯ ಮೇಲಿನ 75ರಷ್ಟು ನೀರಿನ ಅಂಶವಿದೆ , ಹಾಗೆ ಹಚ್ಚು ಹಸುರು ಪ್ರಕೃತಿ ಸಂಕೇತವನ್ನು ಸುಚಿಸುತ್ತದೆ ಎಂಬ ಅರ್ಥವನ್ನು ನೀಡುತ್ತದೆ. ಹೀಗೆ ನಮ್ಮ ಪೂರ್ವಜರು ಭೂಮಿಯ ಆಕಾರದ ಬಗ್ಗೆ ತಿಳಿಸಿದರು . ಆದರೆ ನಾವುಗಳು ಅದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವೇವಾಗಲಿಲ್ಲ.. ಹೀಗಿರುವಾಗ ನಮ್ಮ ಸಮಾಜವನ್ನು ಯಾವ ರೀತಿ ರಕ್ಷಣೆ ಮಾಡಬೇಕು, ಹಾಗೆ ಯಾವ ರೀತಿ ನಮ್ಮ ಪೂರ್ವಜರು ವೈಜ್ಞಾನಿಕ ವಿಚಾರವನ್ನು ಹೊಂದಿದ್ದರು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಿಳಿ ಪಡಿಸಿದರು.

ಇದೇ ಸಂದರ್ಭದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ, ಗೋರ್ ಸೇನಾ
ಸಂಘಟನೆ ವತಿಯಿಂದ ನಾರಾಯಣಪುರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಶೇಖರ್ ರಾಠೋಡ ಅವರಿಗೆ ಸನ್ಮಾನ ಹಮ್ಮಿಕೊಂಡಿದ್ದರು ಮತ್ತು ಅದರ ಜೊತೆಯಲ್ಲಿ ಚಂದು ಹರಾವತ್ ಪೊಲೀಸ್ ಇವರಿಗೂ ಸಹ ಸನ್ಮಾನವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಗೋರ್ ಸೇನಾ ಸಂಘಟನೆಯ ಕರ್ನಾಟಕ ಜೊತೆ ಹುಣಸಗಿ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು, ಗುರುಹಿರಿಯರು ಇದ್ದರು.

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ