Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐ ಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ (Got banjara) ಹಮ್ಮಿಕೊಳ್ಳಲಾಗಿತ್ತು.

ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ..

ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

Join Out Telegram: https://t.me/dcgkannada

ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೂಡ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಭೂಕೇನ ಬಾಟಿ ಖರಾಯೇರೋ,
ತರಸೇನ ಪಾಣಿ ಪರಾಯೇರೋ ,
ಬೋಲಾಡಿ ಪಡಮೇಲೋಜೆನ ವಾಟ ವತಾಯೇರೋ ,
ಆಶ್ರೋ ಚೇಯಿಜೇನ ಆಶ್ರೋ ದೇರೋ.

ಅರ್ಥ – ಹಸುವಿನಲ್ಲಿ ಇರುವನಿಗೆ ಊಟ ಬಡಿಸಿ, ನೀರು ಧಣಿದು ಬಂದವರಿಗೆ ನೀರು ಕೊಡಿ, ಜೀವನದಲ್ಲಿ ದಾರಿ ತಪ್ಪಿದವರಿಗೆ ಸರಿಯಾದ ದಾರಿ ಮಾರ್ಗ ತೋರಿಸಿ, ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಸಹಾಯ ಮಾಡಿ. ಎಂದು ಸದ್ಗುರು ಸೇವಾಲಾಲ್ ಮಾಹಾರಾಜ್ ಹೇಳಿದ್ದಾರೆ ಎಂದು ತಿಳಿಸಿದರು.

ಹಾಗೆ ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಗೋರ್ ಸಮಾಜದ ಯೋಧರ ಬಗ್ಗೆ ನಮ್ಮ ಇತಿಹಾಸ ಪುಟದಲ್ಲಿ ಎಲ್ಲಿಯೂ ಕಾಣದಂತೆ ಮರೆಮಾಚಿಸಿದ್ದಾರೆ. ನೋವಿನ ವಿಷಯವೇನೆಂದರೆ ಬ್ರಿಟಿಷರ ಜೊತೆ ಮೊದಲ ಬಾರಿಗೆ ಗೋರ್ ಸಮಾಜದವತಿಯಿಂದ (ಟ್ಯಾಕ್ಸ್) ತೆರಿಗೆ ವಿಚಾರವಾಗಿ ಧ್ವನಿಯೆತ್ತಿದ ವೀರರ ಹೆಸರು ಎಲ್ಲಿಯೂ ಕಾಣದಂತಾಗಿದೆ.. ಅದೇನಪ್ಪ ಅಂದರೆ ಮೊದಲ ಬಾರಿಗೆ “ಮಾರೋ ತಾಂಡೋ ಮಾರೋ ರಾಜ್ ” ಎಂಬ ಧ್ವನಿಯನ್ನು ಎತ್ತಿದ ಮೊದಲ ನಾಯಕನೇ ಸದ್ಗುರು ಸೇವಾಲಾಲ್ ಮಾಹಾರಾಜ್.
ಅಂದರೆ ನಾವು ಯಾಕೆ ತೆರಿಗೆ ಕಟ್ಟಬೇಕು (ಟ್ಯಾಕ್ಸನ್ನ). ನನ್ನ ಊರು ನನ್ನ ಭೂಮಿ ನಿಮಗೇಕೆ ಕಟ್ಟಬೇಕು ತೆರಿಗೆ (ಟ್ಯಾಕ್ಸ್) ಎಂದು ಧ್ವನಿಯೆತ್ತಿದರು.

ಇಂಥ ವೀರಯೋಧನ ಬಗ್ಗೆ ಇತಿಹಾಸದಲ್ಲಿ ಹೆಸರು ಇಲ್ಲದಂತಾಗಿದೆ . ಹೀಗಿದ್ದಲ್ಲಿ ನಾಳೆ ನಾವು ಇದ್ದರೂ ಸತ್ತಂತಾಗುತ್ತದೆ. ಸಮಾಜದ ಅಳಿವಿನ ಅಂಚಿನಲ್ಲಿದೆ ಎಂದು ಗೋರ್ ಸೇನಾ ಸಂಘಟನೆವತಿಯಿಂದ ತಿಳಿಸಿದರು.

ಕೋರೆ ಗೋರೇನ ಸಾಯಿವೇಸ್ ,
ಜೀವ ಜನಗಾನಿನ ಸಾಯಿವೇಸ್,
ಖುಟ ಮುಂಗರೀನ್ ಸಾಯಿವೇಸ,

ಈ ಭೂಮಿ ಮೇಲಿರುವ ಜನಾಂಗಕ್ಕೆ ಹಾಗೂ ಗೋರ್ ಸಮಾಜದ ಜನಾಂಗದವರಿಗೂ ಲೆಸನ್ನು ಬಯರುವುದು , ಪ್ರಕೃತಿಯಲ್ಲಿ ಇರುವ ಜೀವಿಸುತ್ತಿರುವ ಎಲ್ಲಾ ಜೀವ ರಾಶಿಗಳಿಗೂ ಹಾಗೂ ನಿರ್ಜಿವ ವಸ್ತುವಿಗೂ ಲೆಸನ್ನು ಬಯರುವುದು. ಎಂದು ವಿನಂತಿ ಮಾಡಿಕೊಳ್ಳುತ್ತಾರೆ.

ಅದರ ಜೊತೆಯಲ್ಲಿ ಅರ್ಥಗರ್ಭಿತವಾದ ಒಂದು ಗೋಲಾದ ವೃತ್ತವನ್ನು ( ಚೋಕೋ ) ತೆಗೆದು ಅದರ ಮಧ್ಯದಲ್ಲಿ ನಾಲ್ಕು ದಿಕ್ಕುಗಳಂತೆ ತೋರಿಸಿ, ಮಧ್ಯದಲ್ಲಿ ಒಂದು ಕಳಸ ಅದರಲ್ಲಿ 75ರಷ್ಟು ನೀರಿನ ಪ್ರಮಾಣ ಹಾಕಿ ಅದರ ಕಳಸದ ಒಳಗಡೆ ಬೇವಿನ ಎಲೆಯನ್ನು ಹಾಕುತ್ತಾರೆ.. ಇದರ ಅರ್ಥ 3ಸಾವಿರ – 4 ಸಾವಿರ ವರ್ಷಗಳ ಹಿಂದೆ ನಮ್ಮ ಪೂರ್ವಜರು ನಮಗೆ ತಿಳಿಸಿ ಹೋದರು ಇನ್ನುವರೆಗೂ ಇದರ ಬಗ್ಗೆ ಅರ್ಥವಾಗಿಲ್ಲ ಅದೇನಪ್ಪ ಅಂದರೆ ಭೂಮಿಯು ಗೋಲಾಕಾರವಾಗಿದೆ, ಭೂಮಿಯ ಮೇಲಿನ 75ರಷ್ಟು ನೀರಿನ ಅಂಶವಿದೆ , ಹಾಗೆ ಹಚ್ಚು ಹಸುರು ಪ್ರಕೃತಿ ಸಂಕೇತವನ್ನು ಸುಚಿಸುತ್ತದೆ ಎಂಬ ಅರ್ಥವನ್ನು ನೀಡುತ್ತದೆ. ಹೀಗೆ ನಮ್ಮ ಪೂರ್ವಜರು ಭೂಮಿಯ ಆಕಾರದ ಬಗ್ಗೆ ತಿಳಿಸಿದರು . ಆದರೆ ನಾವುಗಳು ಅದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವೇವಾಗಲಿಲ್ಲ.. ಹೀಗಿರುವಾಗ ನಮ್ಮ ಸಮಾಜವನ್ನು ಯಾವ ರೀತಿ ರಕ್ಷಣೆ ಮಾಡಬೇಕು, ಹಾಗೆ ಯಾವ ರೀತಿ ನಮ್ಮ ಪೂರ್ವಜರು ವೈಜ್ಞಾನಿಕ ವಿಚಾರವನ್ನು ಹೊಂದಿದ್ದರು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಿಳಿ ಪಡಿಸಿದರು.

ಇದೇ ಸಂದರ್ಭದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ, ಗೋರ್ ಸೇನಾ
ಸಂಘಟನೆ ವತಿಯಿಂದ ನಾರಾಯಣಪುರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಶೇಖರ್ ರಾಠೋಡ ಅವರಿಗೆ ಸನ್ಮಾನ ಹಮ್ಮಿಕೊಂಡಿದ್ದರು ಮತ್ತು ಅದರ ಜೊತೆಯಲ್ಲಿ ಚಂದು ಹರಾವತ್ ಪೊಲೀಸ್ ಇವರಿಗೂ ಸಹ ಸನ್ಮಾನವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಗೋರ್ ಸೇನಾ ಸಂಘಟನೆಯ ಕರ್ನಾಟಕ ಜೊತೆ ಹುಣಸಗಿ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು, ಗುರುಹಿರಿಯರು ಇದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ