Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐ ಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ (Got banjara) ಹಮ್ಮಿಕೊಳ್ಳಲಾಗಿತ್ತು.

ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ..

ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

Join Out Telegram: https://t.me/dcgkannada

ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೂಡ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಭೂಕೇನ ಬಾಟಿ ಖರಾಯೇರೋ,
ತರಸೇನ ಪಾಣಿ ಪರಾಯೇರೋ ,
ಬೋಲಾಡಿ ಪಡಮೇಲೋಜೆನ ವಾಟ ವತಾಯೇರೋ ,
ಆಶ್ರೋ ಚೇಯಿಜೇನ ಆಶ್ರೋ ದೇರೋ.

ಅರ್ಥ – ಹಸುವಿನಲ್ಲಿ ಇರುವನಿಗೆ ಊಟ ಬಡಿಸಿ, ನೀರು ಧಣಿದು ಬಂದವರಿಗೆ ನೀರು ಕೊಡಿ, ಜೀವನದಲ್ಲಿ ದಾರಿ ತಪ್ಪಿದವರಿಗೆ ಸರಿಯಾದ ದಾರಿ ಮಾರ್ಗ ತೋರಿಸಿ, ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಸಹಾಯ ಮಾಡಿ. ಎಂದು ಸದ್ಗುರು ಸೇವಾಲಾಲ್ ಮಾಹಾರಾಜ್ ಹೇಳಿದ್ದಾರೆ ಎಂದು ತಿಳಿಸಿದರು.

ಹಾಗೆ ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಗೋರ್ ಸಮಾಜದ ಯೋಧರ ಬಗ್ಗೆ ನಮ್ಮ ಇತಿಹಾಸ ಪುಟದಲ್ಲಿ ಎಲ್ಲಿಯೂ ಕಾಣದಂತೆ ಮರೆಮಾಚಿಸಿದ್ದಾರೆ. ನೋವಿನ ವಿಷಯವೇನೆಂದರೆ ಬ್ರಿಟಿಷರ ಜೊತೆ ಮೊದಲ ಬಾರಿಗೆ ಗೋರ್ ಸಮಾಜದವತಿಯಿಂದ (ಟ್ಯಾಕ್ಸ್) ತೆರಿಗೆ ವಿಚಾರವಾಗಿ ಧ್ವನಿಯೆತ್ತಿದ ವೀರರ ಹೆಸರು ಎಲ್ಲಿಯೂ ಕಾಣದಂತಾಗಿದೆ.. ಅದೇನಪ್ಪ ಅಂದರೆ ಮೊದಲ ಬಾರಿಗೆ “ಮಾರೋ ತಾಂಡೋ ಮಾರೋ ರಾಜ್ ” ಎಂಬ ಧ್ವನಿಯನ್ನು ಎತ್ತಿದ ಮೊದಲ ನಾಯಕನೇ ಸದ್ಗುರು ಸೇವಾಲಾಲ್ ಮಾಹಾರಾಜ್.
ಅಂದರೆ ನಾವು ಯಾಕೆ ತೆರಿಗೆ ಕಟ್ಟಬೇಕು (ಟ್ಯಾಕ್ಸನ್ನ). ನನ್ನ ಊರು ನನ್ನ ಭೂಮಿ ನಿಮಗೇಕೆ ಕಟ್ಟಬೇಕು ತೆರಿಗೆ (ಟ್ಯಾಕ್ಸ್) ಎಂದು ಧ್ವನಿಯೆತ್ತಿದರು.

ಇಂಥ ವೀರಯೋಧನ ಬಗ್ಗೆ ಇತಿಹಾಸದಲ್ಲಿ ಹೆಸರು ಇಲ್ಲದಂತಾಗಿದೆ . ಹೀಗಿದ್ದಲ್ಲಿ ನಾಳೆ ನಾವು ಇದ್ದರೂ ಸತ್ತಂತಾಗುತ್ತದೆ. ಸಮಾಜದ ಅಳಿವಿನ ಅಂಚಿನಲ್ಲಿದೆ ಎಂದು ಗೋರ್ ಸೇನಾ ಸಂಘಟನೆವತಿಯಿಂದ ತಿಳಿಸಿದರು.

ಕೋರೆ ಗೋರೇನ ಸಾಯಿವೇಸ್ ,
ಜೀವ ಜನಗಾನಿನ ಸಾಯಿವೇಸ್,
ಖುಟ ಮುಂಗರೀನ್ ಸಾಯಿವೇಸ,

ಈ ಭೂಮಿ ಮೇಲಿರುವ ಜನಾಂಗಕ್ಕೆ ಹಾಗೂ ಗೋರ್ ಸಮಾಜದ ಜನಾಂಗದವರಿಗೂ ಲೆಸನ್ನು ಬಯರುವುದು , ಪ್ರಕೃತಿಯಲ್ಲಿ ಇರುವ ಜೀವಿಸುತ್ತಿರುವ ಎಲ್ಲಾ ಜೀವ ರಾಶಿಗಳಿಗೂ ಹಾಗೂ ನಿರ್ಜಿವ ವಸ್ತುವಿಗೂ ಲೆಸನ್ನು ಬಯರುವುದು. ಎಂದು ವಿನಂತಿ ಮಾಡಿಕೊಳ್ಳುತ್ತಾರೆ.

ಅದರ ಜೊತೆಯಲ್ಲಿ ಅರ್ಥಗರ್ಭಿತವಾದ ಒಂದು ಗೋಲಾದ ವೃತ್ತವನ್ನು ( ಚೋಕೋ ) ತೆಗೆದು ಅದರ ಮಧ್ಯದಲ್ಲಿ ನಾಲ್ಕು ದಿಕ್ಕುಗಳಂತೆ ತೋರಿಸಿ, ಮಧ್ಯದಲ್ಲಿ ಒಂದು ಕಳಸ ಅದರಲ್ಲಿ 75ರಷ್ಟು ನೀರಿನ ಪ್ರಮಾಣ ಹಾಕಿ ಅದರ ಕಳಸದ ಒಳಗಡೆ ಬೇವಿನ ಎಲೆಯನ್ನು ಹಾಕುತ್ತಾರೆ.. ಇದರ ಅರ್ಥ 3ಸಾವಿರ – 4 ಸಾವಿರ ವರ್ಷಗಳ ಹಿಂದೆ ನಮ್ಮ ಪೂರ್ವಜರು ನಮಗೆ ತಿಳಿಸಿ ಹೋದರು ಇನ್ನುವರೆಗೂ ಇದರ ಬಗ್ಗೆ ಅರ್ಥವಾಗಿಲ್ಲ ಅದೇನಪ್ಪ ಅಂದರೆ ಭೂಮಿಯು ಗೋಲಾಕಾರವಾಗಿದೆ, ಭೂಮಿಯ ಮೇಲಿನ 75ರಷ್ಟು ನೀರಿನ ಅಂಶವಿದೆ , ಹಾಗೆ ಹಚ್ಚು ಹಸುರು ಪ್ರಕೃತಿ ಸಂಕೇತವನ್ನು ಸುಚಿಸುತ್ತದೆ ಎಂಬ ಅರ್ಥವನ್ನು ನೀಡುತ್ತದೆ. ಹೀಗೆ ನಮ್ಮ ಪೂರ್ವಜರು ಭೂಮಿಯ ಆಕಾರದ ಬಗ್ಗೆ ತಿಳಿಸಿದರು . ಆದರೆ ನಾವುಗಳು ಅದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವೇವಾಗಲಿಲ್ಲ.. ಹೀಗಿರುವಾಗ ನಮ್ಮ ಸಮಾಜವನ್ನು ಯಾವ ರೀತಿ ರಕ್ಷಣೆ ಮಾಡಬೇಕು, ಹಾಗೆ ಯಾವ ರೀತಿ ನಮ್ಮ ಪೂರ್ವಜರು ವೈಜ್ಞಾನಿಕ ವಿಚಾರವನ್ನು ಹೊಂದಿದ್ದರು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಿಳಿ ಪಡಿಸಿದರು.

ಇದೇ ಸಂದರ್ಭದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ, ಗೋರ್ ಸೇನಾ
ಸಂಘಟನೆ ವತಿಯಿಂದ ನಾರಾಯಣಪುರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಶೇಖರ್ ರಾಠೋಡ ಅವರಿಗೆ ಸನ್ಮಾನ ಹಮ್ಮಿಕೊಂಡಿದ್ದರು ಮತ್ತು ಅದರ ಜೊತೆಯಲ್ಲಿ ಚಂದು ಹರಾವತ್ ಪೊಲೀಸ್ ಇವರಿಗೂ ಸಹ ಸನ್ಮಾನವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಗೋರ್ ಸೇನಾ ಸಂಘಟನೆಯ ಕರ್ನಾಟಕ ಜೊತೆ ಹುಣಸಗಿ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು, ಗುರುಹಿರಿಯರು ಇದ್ದರು.

Latest News

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್