Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐ ಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ (Got banjara) ಹಮ್ಮಿಕೊಳ್ಳಲಾಗಿತ್ತು.

ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ..

ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

Join Out Telegram: https://t.me/dcgkannada

ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೂಡ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಭೂಕೇನ ಬಾಟಿ ಖರಾಯೇರೋ,
ತರಸೇನ ಪಾಣಿ ಪರಾಯೇರೋ ,
ಬೋಲಾಡಿ ಪಡಮೇಲೋಜೆನ ವಾಟ ವತಾಯೇರೋ ,
ಆಶ್ರೋ ಚೇಯಿಜೇನ ಆಶ್ರೋ ದೇರೋ.

ಅರ್ಥ – ಹಸುವಿನಲ್ಲಿ ಇರುವನಿಗೆ ಊಟ ಬಡಿಸಿ, ನೀರು ಧಣಿದು ಬಂದವರಿಗೆ ನೀರು ಕೊಡಿ, ಜೀವನದಲ್ಲಿ ದಾರಿ ತಪ್ಪಿದವರಿಗೆ ಸರಿಯಾದ ದಾರಿ ಮಾರ್ಗ ತೋರಿಸಿ, ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಸಹಾಯ ಮಾಡಿ. ಎಂದು ಸದ್ಗುರು ಸೇವಾಲಾಲ್ ಮಾಹಾರಾಜ್ ಹೇಳಿದ್ದಾರೆ ಎಂದು ತಿಳಿಸಿದರು.

ಹಾಗೆ ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಗೋರ್ ಸಮಾಜದ ಯೋಧರ ಬಗ್ಗೆ ನಮ್ಮ ಇತಿಹಾಸ ಪುಟದಲ್ಲಿ ಎಲ್ಲಿಯೂ ಕಾಣದಂತೆ ಮರೆಮಾಚಿಸಿದ್ದಾರೆ. ನೋವಿನ ವಿಷಯವೇನೆಂದರೆ ಬ್ರಿಟಿಷರ ಜೊತೆ ಮೊದಲ ಬಾರಿಗೆ ಗೋರ್ ಸಮಾಜದವತಿಯಿಂದ (ಟ್ಯಾಕ್ಸ್) ತೆರಿಗೆ ವಿಚಾರವಾಗಿ ಧ್ವನಿಯೆತ್ತಿದ ವೀರರ ಹೆಸರು ಎಲ್ಲಿಯೂ ಕಾಣದಂತಾಗಿದೆ.. ಅದೇನಪ್ಪ ಅಂದರೆ ಮೊದಲ ಬಾರಿಗೆ “ಮಾರೋ ತಾಂಡೋ ಮಾರೋ ರಾಜ್ ” ಎಂಬ ಧ್ವನಿಯನ್ನು ಎತ್ತಿದ ಮೊದಲ ನಾಯಕನೇ ಸದ್ಗುರು ಸೇವಾಲಾಲ್ ಮಾಹಾರಾಜ್.
ಅಂದರೆ ನಾವು ಯಾಕೆ ತೆರಿಗೆ ಕಟ್ಟಬೇಕು (ಟ್ಯಾಕ್ಸನ್ನ). ನನ್ನ ಊರು ನನ್ನ ಭೂಮಿ ನಿಮಗೇಕೆ ಕಟ್ಟಬೇಕು ತೆರಿಗೆ (ಟ್ಯಾಕ್ಸ್) ಎಂದು ಧ್ವನಿಯೆತ್ತಿದರು.

ಇಂಥ ವೀರಯೋಧನ ಬಗ್ಗೆ ಇತಿಹಾಸದಲ್ಲಿ ಹೆಸರು ಇಲ್ಲದಂತಾಗಿದೆ . ಹೀಗಿದ್ದಲ್ಲಿ ನಾಳೆ ನಾವು ಇದ್ದರೂ ಸತ್ತಂತಾಗುತ್ತದೆ. ಸಮಾಜದ ಅಳಿವಿನ ಅಂಚಿನಲ್ಲಿದೆ ಎಂದು ಗೋರ್ ಸೇನಾ ಸಂಘಟನೆವತಿಯಿಂದ ತಿಳಿಸಿದರು.

ಕೋರೆ ಗೋರೇನ ಸಾಯಿವೇಸ್ ,
ಜೀವ ಜನಗಾನಿನ ಸಾಯಿವೇಸ್,
ಖುಟ ಮುಂಗರೀನ್ ಸಾಯಿವೇಸ,

ಈ ಭೂಮಿ ಮೇಲಿರುವ ಜನಾಂಗಕ್ಕೆ ಹಾಗೂ ಗೋರ್ ಸಮಾಜದ ಜನಾಂಗದವರಿಗೂ ಲೆಸನ್ನು ಬಯರುವುದು , ಪ್ರಕೃತಿಯಲ್ಲಿ ಇರುವ ಜೀವಿಸುತ್ತಿರುವ ಎಲ್ಲಾ ಜೀವ ರಾಶಿಗಳಿಗೂ ಹಾಗೂ ನಿರ್ಜಿವ ವಸ್ತುವಿಗೂ ಲೆಸನ್ನು ಬಯರುವುದು. ಎಂದು ವಿನಂತಿ ಮಾಡಿಕೊಳ್ಳುತ್ತಾರೆ.

ಅದರ ಜೊತೆಯಲ್ಲಿ ಅರ್ಥಗರ್ಭಿತವಾದ ಒಂದು ಗೋಲಾದ ವೃತ್ತವನ್ನು ( ಚೋಕೋ ) ತೆಗೆದು ಅದರ ಮಧ್ಯದಲ್ಲಿ ನಾಲ್ಕು ದಿಕ್ಕುಗಳಂತೆ ತೋರಿಸಿ, ಮಧ್ಯದಲ್ಲಿ ಒಂದು ಕಳಸ ಅದರಲ್ಲಿ 75ರಷ್ಟು ನೀರಿನ ಪ್ರಮಾಣ ಹಾಕಿ ಅದರ ಕಳಸದ ಒಳಗಡೆ ಬೇವಿನ ಎಲೆಯನ್ನು ಹಾಕುತ್ತಾರೆ.. ಇದರ ಅರ್ಥ 3ಸಾವಿರ – 4 ಸಾವಿರ ವರ್ಷಗಳ ಹಿಂದೆ ನಮ್ಮ ಪೂರ್ವಜರು ನಮಗೆ ತಿಳಿಸಿ ಹೋದರು ಇನ್ನುವರೆಗೂ ಇದರ ಬಗ್ಗೆ ಅರ್ಥವಾಗಿಲ್ಲ ಅದೇನಪ್ಪ ಅಂದರೆ ಭೂಮಿಯು ಗೋಲಾಕಾರವಾಗಿದೆ, ಭೂಮಿಯ ಮೇಲಿನ 75ರಷ್ಟು ನೀರಿನ ಅಂಶವಿದೆ , ಹಾಗೆ ಹಚ್ಚು ಹಸುರು ಪ್ರಕೃತಿ ಸಂಕೇತವನ್ನು ಸುಚಿಸುತ್ತದೆ ಎಂಬ ಅರ್ಥವನ್ನು ನೀಡುತ್ತದೆ. ಹೀಗೆ ನಮ್ಮ ಪೂರ್ವಜರು ಭೂಮಿಯ ಆಕಾರದ ಬಗ್ಗೆ ತಿಳಿಸಿದರು . ಆದರೆ ನಾವುಗಳು ಅದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವೇವಾಗಲಿಲ್ಲ.. ಹೀಗಿರುವಾಗ ನಮ್ಮ ಸಮಾಜವನ್ನು ಯಾವ ರೀತಿ ರಕ್ಷಣೆ ಮಾಡಬೇಕು, ಹಾಗೆ ಯಾವ ರೀತಿ ನಮ್ಮ ಪೂರ್ವಜರು ವೈಜ್ಞಾನಿಕ ವಿಚಾರವನ್ನು ಹೊಂದಿದ್ದರು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಿಳಿ ಪಡಿಸಿದರು.

ಇದೇ ಸಂದರ್ಭದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ, ಗೋರ್ ಸೇನಾ
ಸಂಘಟನೆ ವತಿಯಿಂದ ನಾರಾಯಣಪುರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಶೇಖರ್ ರಾಠೋಡ ಅವರಿಗೆ ಸನ್ಮಾನ ಹಮ್ಮಿಕೊಂಡಿದ್ದರು ಮತ್ತು ಅದರ ಜೊತೆಯಲ್ಲಿ ಚಂದು ಹರಾವತ್ ಪೊಲೀಸ್ ಇವರಿಗೂ ಸಹ ಸನ್ಮಾನವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಗೋರ್ ಸೇನಾ ಸಂಘಟನೆಯ ಕರ್ನಾಟಕ ಜೊತೆ ಹುಣಸಗಿ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು, ಗುರುಹಿರಿಯರು ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.