ಸಿಎಂಗೆ ನೋಟಿಸ್, ಪ್ರಜಾಪ್ರಭುತ್ವಕ್ಕೆ ಅವಮಾನ ಎಂದ ಕಾಂಗ್ರೆಸ್ ಮುಖಂಡ ಅಸ್ಕಿ

ಸಿಎಂಗೆ ನೋಟಿಸ್, ಪ್ರಜಾಪ್ರಭುತ್ವಕ್ಕೆ ಅವಮಾನ ಎಂದ ಕಾಂಗ್ರೆಸ್ ಮುಖಂಡ ಅಸ್ಕಿ

ಮುದ್ದೇಬಿಹಾಳ : ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ರಾಜ್ಯಪಾಲರ ನೋಟೀಸ್ ಕೊಟ್ಡಿರುವ ಕ್ರಮ ಪ್ರಜಾಪ್ರಭುತ್ವಕ್ಕೆ ಅಪಮಾನ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಕಿಡಿ ಕಾರಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ರಾಜ್ಯಪಾಲರು ಇದುವರೆವಿಗೂ ಯಾವ ಗೊಂದಲಕ್ಕೂ ಸಿಕ್ಕಿರಲಿಲ್ಲ. ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಇಲ್ಲಿ ರಾಜ್ಯಪಾಲರುಗಳು ಗೊಂದಲವನ್ನೇ ಸೃಷ್ಟಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರವನ್ನು ಕೆಳಗಿಳಿಸುವ ಪಿತೂರಿ ಕೇಂದ್ರದಿಂದಲೇ ಆರಂಭವಾಗಿದೆ. ಮುಡಾ ಬಗ್ಗೆ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ಮಾಡಿ ನ್ಯಾಯಾಧೀಶರು ಆಯ್ಕೆಯಾಗಿದ್ದಾರೆ.

ಈ ಮಧ್ಯೆ ರಾಜ್ಯಪಾಲರ ನೋಟೀಸ್ ಅರ್ಥಹೀನ. ರಾಜಭವನ ರಾಜಕೀಯ ಭವನ ಆಗಬಾರದು. ಕರ್ನಾಟಕದ ರಾಜ್ಯಪಾಲರ ಬಗ್ಗೆ ಬಹಳ ಗೌರವವಿದೆ. ಅವರು ಈ ರೀತಿ ಗೊಂದಲಕ್ಕೆ ಸಿಕ್ಕಿರುವುದು ರಾಜಕೀಯ ಒತ್ತಡದಿಂದ ಎಂಬುದು ತಿಳಿದು ಬರುತ್ತದೆ ಎಂದು ಹೇಳಿದ್ದಾರೆ.

ರಾಜ್ಯಪಾಲರು ಸಿಎಂಗೆ ನೋಟಿಸ್ ಕೊಡುವುದರ ಹಿಂದೆ ಬಿಜೆಪಿ,ಜೆಡಿಎಸ್ ಪಕ್ಷದ ನಾಯಕರ ಪಿತೂರಿ ಇದೆ.ಸಂವಿಧಾನ ವಿರೋಧಿ ರಾಜ್ಯಪಾಲರ ಈ ನಿಲುವನ್ನು ವಿರೋಧಿಸುವ ಜೊತೆಗೆ ಬಿಜೆಪಿ ಜೆಡಿಎಸ್ ನ ಕುತಂತ್ರದ ಕುರಿತು ಹೋರಾಟ ಜಿಲ್ಲಾ ಕೇಂದ್ರದಲ್ಲಿ ಆ. 6 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು ಇದರಲ್ಲಿ ಪಕ್ಷದ ಅಭಿಮಾನಿಗಳು, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಭಿಮಾನಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ