ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಬೆಳಗಾವಿ(ಸುವರ್ಣ ವಿಧಾನಸೌಧ ): ಕಾರ್ಯನಿರತ ಪತ್ರಕರ್ತರ ಸಂಘಟನೆಯವರು ಮುಂದಿರಿಸಿರುವ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದು ಈಡೇರಿಸಲು ಕ್ರಮ ಜರುಗಿಸುವುದಾಗಿ ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದರು.

ಬೆಳಗಾವಿ ವಿಧಾನಸೌಧದ ಎದುರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಹೋರಾಟದ ಸ್ಥಳಕ್ಕೆ ಆಗಮಿಸಿದ ಸಚಿವ ಕೆ.ಎಚ್.ಮುನಿಯಪ್ಪ ಅವರು ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರೊಂದಿಗೆ ಮಾತುಕತೆ ನಡೆಸಿದರು.

ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಮಾತನಾಡಿ,ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿ, ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಜಾರಿಗೊಳಿಸಿರುವ ಉಚಿತ ಬಸ್ ಪಾಸ್ ವಿತರಣೆಗೆ ವಿಧಿಸಿರುವ ಮಾನದಂಡಗಳನ್ನು ಸಡಿಲಿಸುವುದು, ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿ ಭರ್ತಿ, ಟೋಲ್ ನಾಕಾಗಳಲ್ಲಿ ಪತ್ರಕರ್ತರಿಗೆ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಸಿಎಂ ಸಿದ್ಧರಾಮಯ್ಯನವರ ಸೂಚನೆ ಮೇರೆಗೆ ನಾನು ಮನವಿ ಸ್ವೀಕರಿಸಲು ಬಂದಿದ್ದೇನೆ. ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದು ಸಂಬಂಧಿಸಿದ ಸಚಿವರುಗಳ ಗಮನಕ್ಕೆ ತಂದು ಈಡೇರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಅಧ್ಯಕ್ಷ ಅಶೋಕ ರಾಠೋಡ, ಕಾರ್ಯಾಧ್ಯಕ್ಷ ಇರ್ಫಾನ್ ಬೀಳಗಿ, ರಾಜ್ಯ ಪದಾಧಿಕಾರಿಗಳಾದ ಬಸವರಾಜ ಸಿರಸಂಗಿ, ಎಸ್.ಎಸ್.ಪಾಟೀಲ, ಜಿಗಳೂರು ಲಕ್ಷ್ಮಣರಾವ್, ಜಾನ್ಸನ್ ಗೋಡೆ, ಎಂ.ಇಸಾಕ್, ಮಂಜುಳಾ.ಬಿ., ನಿಡಗುಂದಿ ಕಾನಿಪ ಧ್ವನಿ ತಾಲ್ಲೂಕು ಅಧ್ಯಕ್ಷ ರಾಜಶೇಖರ ಹಿರೇಮಠ, ಮುದ್ದೇಬಿಹಾಳ ಧ್ವನಿ ಸದಸ್ಯ ರವಿ ದಂಡಿನ್, ವೀರೇಶ ಮೇಟಿ ಮೊದಲಾದವರು ಇದ್ದರು.

ವರದಿ: ಶಂಕರ ಹೆಬ್ಬಾಳ, ಮುದ್ದೇಬಿಹಾಳ ಕಾನಿಪ ಧ್ವನಿ ಅಧ್ಯಕ್ಷರು

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ