'Governors should give the answer, not their balangochis'-BJP leader's rant at press conference

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಮುದ್ದೇಬಿಹಾಳ : ‘ಸೈಟ್ ಅಕ್ರಮ ಖರೀದಿಯ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮಾಡಿರುವ ಆರೋಪದ ಬಗ್ಗೆ ಶಾಸಕ ನಾಡಗೌಡರೇ ಉತ್ತರ ಕೊಡಬೇಕೆ ಹೊರತು ಅವರ ಬಾಲಂಗೋಚಿಗಳಲ್ಲ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹಾಗೂ ಬಿಜೆಪಿ ಮುಖಂಡ ಹರೀಶ ನಾಟೀಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಾಲಿ ಶಾಸಕರು ತಂದಿರುವ ಅನುದಾನ ಎಷ್ಟು ಎಂಬುದನ್ನು ಆಧಾರ ಸಮೇತ ಕಾಂಗ್ರೆಸ್ಸಿಗರು ಮಾಧ್ಯಮವರಿಗೆ ವಿವರಿಸಬೇಕು. ಅದು ಬಿಟ್ಟು ಕೂಗಾಡುವುದು ಸುದ್ದಿಗೋಷ್ಠಿಯಲ್ಲ. ಅಷ್ಟಕ್ಕೂ ಆರೋಪ ಮಾಡಿದವರಿಗೆ ಆರೋಪ ಯಾರು ಹೊತ್ತಿದ್ದಾರೆಯೋ ಅವರು ಉತ್ತರ ಕೊಡಬೇಕಿತ್ತು. ಆದರೆ ಇಲ್ಲಿ ಕಾಂಗ್ರೆಸ್ ಮುಖಂಡರು, ದಾಖಲೆಗಳಿಲ್ಲದೇ ವಿನಾಕಾರಣ ಶಾಸಕರನ್ನು ಸಮರ್ಥನೆ ಮಾಡಿಕೊಳ್ಳಬೇಕು ಎಂಬ ಉದ್ದೇಶವೊಂದೇ ಇದೆ ಎಂದರು.

ಜನಪ್ರತಿನಿಧಿಯಾದವರಿಗೆ ಒಳ್ಳೆಯತನದ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆಯೂ ಬೇಕು. ಇಪ್ಪತೈದು ವರ್ಷಗಳಿಂದ ಆಗಿರುವ ಅಭಿವೃದ್ಧಿಯನ್ನು ಕ್ಷೇತ್ರದ ಜನತೆ ಗಮನಿಸಿದ್ದಾರೆ, ನಡಹಳ್ಳಿಯವರ ಅವಧಿಯಲ್ಲಾದ ಅಭಿವೃದ್ಧಿಯನ್ನೂ ನೋಡಿದ್ದಾರೆ. ಎಲ್ಲೊ ಒಂದು ಕಡೆ ಸಿಸಿ ರಸ್ತೆ ಬಿರುಕು ಬಿಟ್ಟಿದ್ದನ್ನೇ ಎತ್ತಿ ತೋರಿಸುವ ಕಾಂಗ್ರೆಸ್ ಮುಖಂಡರಿಗೆ ಹಳೇ ಸರಕಾರಿ ರಸ್ತೆಯಲ್ಲಿರುವ ಶೃಂಗಾರಗೌಡ ಪಾಟೀಲರ ಮನೆ ಮುಂದೆ ರಸ್ತೆ ಕಳಪೆಮಟ್ಟದ್ದಾಗಿದ್ದು ಕಂಡಿಲ್ಲವೇ ? ಏಪಿಎಂಸಿಯಲ್ಲಿ ಯಾವ ರೀತಿ ಕೆಲಸ ಮಾಡಲಾಗುತ್ತಿದೆ. ಯಾರು ಗುತ್ತಿಗೆದಾರರು ಇದ್ದಾರೆ ಎಂಬುದನ್ನು ಸ್ವಲ್ಪ ಬಿಡಿಸಿ ಹೇಳಬೇಕಿತ್ತು ಎಂದು ತಿಳಿಸಿದರು.

ಕವಡಿಮಟ್ಟಿ ಗ್ರಾಮಕ್ಕೆ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೆ ಸಿಎಂ ಬಂದಾಗ ಸೌಜನ್ಯಕ್ಕೂ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಸಲಿಲ್ಲ. ನಾಲತವಾಡ, ಮುದ್ದೇಬಿಹಾಳದಲ್ಲಿ ನಿರ್ಮಿಸಿರುವ ವೃತ್ತದಲ್ಲಿರುವ ಪುತ್ಥಳಿಗಳ ನಿರ್ಮಾಣದ ಕಾಮಗಾರಿಗೆ ಬಿಲ್ ಕೊಡದೇ ವಿಳಂಬ ಮಾಡಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದೀರಿ ಎಂದು ದೂರಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ಮಾಜಿ ಶಾಸಕ ನಡಹಳ್ಳಿಯವರು ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ನಾವು ಹೇಳುವುದಕ್ಕೆ ಇಲ್ಲಿ ಕೂತಿಲ್ಲ.ಹಾಲಿ ಶಾಸಕರು ಎಷ್ಟು ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕು ಎಂದರು.

ಸೈಟ್ ಬಗ್ಗೆ ಬಂದಿರುವ ಆರೋಪದ ಬಗ್ಗೆ ಜನತೆಗೆ ಉತ್ತರ ನೀಡಬೇಕು. ಅದು ಬಿಟ್ಟು ಅವರ ಹಿಂಬಾಲಕರನ್ನು ಮುಂದೆ ಮಾಡಿರುವುದು ಸೋಜಿಗದ ಸಂಗತಿ.ಅವರ ನಾಯಕರ ಪರ ಆ ಪಕ್ಷದ ಮುಖಂಡರು ಮಾತನಾಡಿದರೆ ನಮ್ಮ ಪಕ್ಷದ ನಾಯಕರ ಪರವಾಗಿ ನಾವು ಮಾತನಾಡಬೇಕಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮಣ ಬಿಜ್ಜೂರ, ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ ಮಾತನಾಡಿದರು.

ಇದನ್ನೂ ಓದಿ: Protest: ಯಡಹಳ್ಳಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ

ಮುಖಂಡರಾದ ಸೋಮನಗೌಡ ಬಿರಾದಾರ, ಸಂಜು ಬಾಗೇವಾಡಿ, ಶಂಕರಗೌಡ ಶಿವಣಗಿ, ಸುಭಾಷ್ ಕಟ್ಟಿಮನಿ, ನಾಗೇಶ ಕವಡಿಮಟ್ಟಿ, ಶೇಖರ ಢವಳಗಿ, ರೇವಣೆಪ್ಪ ಅಜಮನಿ, ಆನಂದ ಚವ್ಹಾಣ, ಶಿವಾನಂದ ಮಂಕಣಿ, ರವೀಂದ್ರ ಬಿರಾದಾರ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ