'Governors should give the answer, not their balangochis'-BJP leader's rant at press conference

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಮುದ್ದೇಬಿಹಾಳ : ‘ಸೈಟ್ ಅಕ್ರಮ ಖರೀದಿಯ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮಾಡಿರುವ ಆರೋಪದ ಬಗ್ಗೆ ಶಾಸಕ ನಾಡಗೌಡರೇ ಉತ್ತರ ಕೊಡಬೇಕೆ ಹೊರತು ಅವರ ಬಾಲಂಗೋಚಿಗಳಲ್ಲ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹಾಗೂ ಬಿಜೆಪಿ ಮುಖಂಡ ಹರೀಶ ನಾಟೀಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಾಲಿ ಶಾಸಕರು ತಂದಿರುವ ಅನುದಾನ ಎಷ್ಟು ಎಂಬುದನ್ನು ಆಧಾರ ಸಮೇತ ಕಾಂಗ್ರೆಸ್ಸಿಗರು ಮಾಧ್ಯಮವರಿಗೆ ವಿವರಿಸಬೇಕು. ಅದು ಬಿಟ್ಟು ಕೂಗಾಡುವುದು ಸುದ್ದಿಗೋಷ್ಠಿಯಲ್ಲ. ಅಷ್ಟಕ್ಕೂ ಆರೋಪ ಮಾಡಿದವರಿಗೆ ಆರೋಪ ಯಾರು ಹೊತ್ತಿದ್ದಾರೆಯೋ ಅವರು ಉತ್ತರ ಕೊಡಬೇಕಿತ್ತು. ಆದರೆ ಇಲ್ಲಿ ಕಾಂಗ್ರೆಸ್ ಮುಖಂಡರು, ದಾಖಲೆಗಳಿಲ್ಲದೇ ವಿನಾಕಾರಣ ಶಾಸಕರನ್ನು ಸಮರ್ಥನೆ ಮಾಡಿಕೊಳ್ಳಬೇಕು ಎಂಬ ಉದ್ದೇಶವೊಂದೇ ಇದೆ ಎಂದರು.

ಜನಪ್ರತಿನಿಧಿಯಾದವರಿಗೆ ಒಳ್ಳೆಯತನದ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆಯೂ ಬೇಕು. ಇಪ್ಪತೈದು ವರ್ಷಗಳಿಂದ ಆಗಿರುವ ಅಭಿವೃದ್ಧಿಯನ್ನು ಕ್ಷೇತ್ರದ ಜನತೆ ಗಮನಿಸಿದ್ದಾರೆ, ನಡಹಳ್ಳಿಯವರ ಅವಧಿಯಲ್ಲಾದ ಅಭಿವೃದ್ಧಿಯನ್ನೂ ನೋಡಿದ್ದಾರೆ. ಎಲ್ಲೊ ಒಂದು ಕಡೆ ಸಿಸಿ ರಸ್ತೆ ಬಿರುಕು ಬಿಟ್ಟಿದ್ದನ್ನೇ ಎತ್ತಿ ತೋರಿಸುವ ಕಾಂಗ್ರೆಸ್ ಮುಖಂಡರಿಗೆ ಹಳೇ ಸರಕಾರಿ ರಸ್ತೆಯಲ್ಲಿರುವ ಶೃಂಗಾರಗೌಡ ಪಾಟೀಲರ ಮನೆ ಮುಂದೆ ರಸ್ತೆ ಕಳಪೆಮಟ್ಟದ್ದಾಗಿದ್ದು ಕಂಡಿಲ್ಲವೇ ? ಏಪಿಎಂಸಿಯಲ್ಲಿ ಯಾವ ರೀತಿ ಕೆಲಸ ಮಾಡಲಾಗುತ್ತಿದೆ. ಯಾರು ಗುತ್ತಿಗೆದಾರರು ಇದ್ದಾರೆ ಎಂಬುದನ್ನು ಸ್ವಲ್ಪ ಬಿಡಿಸಿ ಹೇಳಬೇಕಿತ್ತು ಎಂದು ತಿಳಿಸಿದರು.

ಕವಡಿಮಟ್ಟಿ ಗ್ರಾಮಕ್ಕೆ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೆ ಸಿಎಂ ಬಂದಾಗ ಸೌಜನ್ಯಕ್ಕೂ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಸಲಿಲ್ಲ. ನಾಲತವಾಡ, ಮುದ್ದೇಬಿಹಾಳದಲ್ಲಿ ನಿರ್ಮಿಸಿರುವ ವೃತ್ತದಲ್ಲಿರುವ ಪುತ್ಥಳಿಗಳ ನಿರ್ಮಾಣದ ಕಾಮಗಾರಿಗೆ ಬಿಲ್ ಕೊಡದೇ ವಿಳಂಬ ಮಾಡಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದೀರಿ ಎಂದು ದೂರಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ಮಾಜಿ ಶಾಸಕ ನಡಹಳ್ಳಿಯವರು ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ನಾವು ಹೇಳುವುದಕ್ಕೆ ಇಲ್ಲಿ ಕೂತಿಲ್ಲ.ಹಾಲಿ ಶಾಸಕರು ಎಷ್ಟು ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕು ಎಂದರು.

ಸೈಟ್ ಬಗ್ಗೆ ಬಂದಿರುವ ಆರೋಪದ ಬಗ್ಗೆ ಜನತೆಗೆ ಉತ್ತರ ನೀಡಬೇಕು. ಅದು ಬಿಟ್ಟು ಅವರ ಹಿಂಬಾಲಕರನ್ನು ಮುಂದೆ ಮಾಡಿರುವುದು ಸೋಜಿಗದ ಸಂಗತಿ.ಅವರ ನಾಯಕರ ಪರ ಆ ಪಕ್ಷದ ಮುಖಂಡರು ಮಾತನಾಡಿದರೆ ನಮ್ಮ ಪಕ್ಷದ ನಾಯಕರ ಪರವಾಗಿ ನಾವು ಮಾತನಾಡಬೇಕಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮಣ ಬಿಜ್ಜೂರ, ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ ಮಾತನಾಡಿದರು.

ಇದನ್ನೂ ಓದಿ: Protest: ಯಡಹಳ್ಳಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ

ಮುಖಂಡರಾದ ಸೋಮನಗೌಡ ಬಿರಾದಾರ, ಸಂಜು ಬಾಗೇವಾಡಿ, ಶಂಕರಗೌಡ ಶಿವಣಗಿ, ಸುಭಾಷ್ ಕಟ್ಟಿಮನಿ, ನಾಗೇಶ ಕವಡಿಮಟ್ಟಿ, ಶೇಖರ ಢವಳಗಿ, ರೇವಣೆಪ್ಪ ಅಜಮನಿ, ಆನಂದ ಚವ್ಹಾಣ, ಶಿವಾನಂದ ಮಂಕಣಿ, ರವೀಂದ್ರ ಬಿರಾದಾರ ಇದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ