'Governors should give the answer, not their balangochis'-BJP leader's rant at press conference

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಮುದ್ದೇಬಿಹಾಳ : ‘ಸೈಟ್ ಅಕ್ರಮ ಖರೀದಿಯ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮಾಡಿರುವ ಆರೋಪದ ಬಗ್ಗೆ ಶಾಸಕ ನಾಡಗೌಡರೇ ಉತ್ತರ ಕೊಡಬೇಕೆ ಹೊರತು ಅವರ ಬಾಲಂಗೋಚಿಗಳಲ್ಲ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹಾಗೂ ಬಿಜೆಪಿ ಮುಖಂಡ ಹರೀಶ ನಾಟೀಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಾಲಿ ಶಾಸಕರು ತಂದಿರುವ ಅನುದಾನ ಎಷ್ಟು ಎಂಬುದನ್ನು ಆಧಾರ ಸಮೇತ ಕಾಂಗ್ರೆಸ್ಸಿಗರು ಮಾಧ್ಯಮವರಿಗೆ ವಿವರಿಸಬೇಕು. ಅದು ಬಿಟ್ಟು ಕೂಗಾಡುವುದು ಸುದ್ದಿಗೋಷ್ಠಿಯಲ್ಲ. ಅಷ್ಟಕ್ಕೂ ಆರೋಪ ಮಾಡಿದವರಿಗೆ ಆರೋಪ ಯಾರು ಹೊತ್ತಿದ್ದಾರೆಯೋ ಅವರು ಉತ್ತರ ಕೊಡಬೇಕಿತ್ತು. ಆದರೆ ಇಲ್ಲಿ ಕಾಂಗ್ರೆಸ್ ಮುಖಂಡರು, ದಾಖಲೆಗಳಿಲ್ಲದೇ ವಿನಾಕಾರಣ ಶಾಸಕರನ್ನು ಸಮರ್ಥನೆ ಮಾಡಿಕೊಳ್ಳಬೇಕು ಎಂಬ ಉದ್ದೇಶವೊಂದೇ ಇದೆ ಎಂದರು.

ಜನಪ್ರತಿನಿಧಿಯಾದವರಿಗೆ ಒಳ್ಳೆಯತನದ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆಯೂ ಬೇಕು. ಇಪ್ಪತೈದು ವರ್ಷಗಳಿಂದ ಆಗಿರುವ ಅಭಿವೃದ್ಧಿಯನ್ನು ಕ್ಷೇತ್ರದ ಜನತೆ ಗಮನಿಸಿದ್ದಾರೆ, ನಡಹಳ್ಳಿಯವರ ಅವಧಿಯಲ್ಲಾದ ಅಭಿವೃದ್ಧಿಯನ್ನೂ ನೋಡಿದ್ದಾರೆ. ಎಲ್ಲೊ ಒಂದು ಕಡೆ ಸಿಸಿ ರಸ್ತೆ ಬಿರುಕು ಬಿಟ್ಟಿದ್ದನ್ನೇ ಎತ್ತಿ ತೋರಿಸುವ ಕಾಂಗ್ರೆಸ್ ಮುಖಂಡರಿಗೆ ಹಳೇ ಸರಕಾರಿ ರಸ್ತೆಯಲ್ಲಿರುವ ಶೃಂಗಾರಗೌಡ ಪಾಟೀಲರ ಮನೆ ಮುಂದೆ ರಸ್ತೆ ಕಳಪೆಮಟ್ಟದ್ದಾಗಿದ್ದು ಕಂಡಿಲ್ಲವೇ ? ಏಪಿಎಂಸಿಯಲ್ಲಿ ಯಾವ ರೀತಿ ಕೆಲಸ ಮಾಡಲಾಗುತ್ತಿದೆ. ಯಾರು ಗುತ್ತಿಗೆದಾರರು ಇದ್ದಾರೆ ಎಂಬುದನ್ನು ಸ್ವಲ್ಪ ಬಿಡಿಸಿ ಹೇಳಬೇಕಿತ್ತು ಎಂದು ತಿಳಿಸಿದರು.

ಕವಡಿಮಟ್ಟಿ ಗ್ರಾಮಕ್ಕೆ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೆ ಸಿಎಂ ಬಂದಾಗ ಸೌಜನ್ಯಕ್ಕೂ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಸಲಿಲ್ಲ. ನಾಲತವಾಡ, ಮುದ್ದೇಬಿಹಾಳದಲ್ಲಿ ನಿರ್ಮಿಸಿರುವ ವೃತ್ತದಲ್ಲಿರುವ ಪುತ್ಥಳಿಗಳ ನಿರ್ಮಾಣದ ಕಾಮಗಾರಿಗೆ ಬಿಲ್ ಕೊಡದೇ ವಿಳಂಬ ಮಾಡಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದೀರಿ ಎಂದು ದೂರಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ಮಾಜಿ ಶಾಸಕ ನಡಹಳ್ಳಿಯವರು ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ನಾವು ಹೇಳುವುದಕ್ಕೆ ಇಲ್ಲಿ ಕೂತಿಲ್ಲ.ಹಾಲಿ ಶಾಸಕರು ಎಷ್ಟು ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕು ಎಂದರು.

ಸೈಟ್ ಬಗ್ಗೆ ಬಂದಿರುವ ಆರೋಪದ ಬಗ್ಗೆ ಜನತೆಗೆ ಉತ್ತರ ನೀಡಬೇಕು. ಅದು ಬಿಟ್ಟು ಅವರ ಹಿಂಬಾಲಕರನ್ನು ಮುಂದೆ ಮಾಡಿರುವುದು ಸೋಜಿಗದ ಸಂಗತಿ.ಅವರ ನಾಯಕರ ಪರ ಆ ಪಕ್ಷದ ಮುಖಂಡರು ಮಾತನಾಡಿದರೆ ನಮ್ಮ ಪಕ್ಷದ ನಾಯಕರ ಪರವಾಗಿ ನಾವು ಮಾತನಾಡಬೇಕಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮಣ ಬಿಜ್ಜೂರ, ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ ಮಾತನಾಡಿದರು.

ಇದನ್ನೂ ಓದಿ: Protest: ಯಡಹಳ್ಳಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ

ಮುಖಂಡರಾದ ಸೋಮನಗೌಡ ಬಿರಾದಾರ, ಸಂಜು ಬಾಗೇವಾಡಿ, ಶಂಕರಗೌಡ ಶಿವಣಗಿ, ಸುಭಾಷ್ ಕಟ್ಟಿಮನಿ, ನಾಗೇಶ ಕವಡಿಮಟ್ಟಿ, ಶೇಖರ ಢವಳಗಿ, ರೇವಣೆಪ್ಪ ಅಜಮನಿ, ಆನಂದ ಚವ್ಹಾಣ, ಶಿವಾನಂದ ಮಂಕಣಿ, ರವೀಂದ್ರ ಬಿರಾದಾರ ಇದ್ದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ