'Governors should give the answer, not their balangochis'-BJP leader's rant at press conference

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಮುದ್ದೇಬಿಹಾಳ : ‘ಸೈಟ್ ಅಕ್ರಮ ಖರೀದಿಯ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮಾಡಿರುವ ಆರೋಪದ ಬಗ್ಗೆ ಶಾಸಕ ನಾಡಗೌಡರೇ ಉತ್ತರ ಕೊಡಬೇಕೆ ಹೊರತು ಅವರ ಬಾಲಂಗೋಚಿಗಳಲ್ಲ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹಾಗೂ ಬಿಜೆಪಿ ಮುಖಂಡ ಹರೀಶ ನಾಟೀಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಾಲಿ ಶಾಸಕರು ತಂದಿರುವ ಅನುದಾನ ಎಷ್ಟು ಎಂಬುದನ್ನು ಆಧಾರ ಸಮೇತ ಕಾಂಗ್ರೆಸ್ಸಿಗರು ಮಾಧ್ಯಮವರಿಗೆ ವಿವರಿಸಬೇಕು. ಅದು ಬಿಟ್ಟು ಕೂಗಾಡುವುದು ಸುದ್ದಿಗೋಷ್ಠಿಯಲ್ಲ. ಅಷ್ಟಕ್ಕೂ ಆರೋಪ ಮಾಡಿದವರಿಗೆ ಆರೋಪ ಯಾರು ಹೊತ್ತಿದ್ದಾರೆಯೋ ಅವರು ಉತ್ತರ ಕೊಡಬೇಕಿತ್ತು. ಆದರೆ ಇಲ್ಲಿ ಕಾಂಗ್ರೆಸ್ ಮುಖಂಡರು, ದಾಖಲೆಗಳಿಲ್ಲದೇ ವಿನಾಕಾರಣ ಶಾಸಕರನ್ನು ಸಮರ್ಥನೆ ಮಾಡಿಕೊಳ್ಳಬೇಕು ಎಂಬ ಉದ್ದೇಶವೊಂದೇ ಇದೆ ಎಂದರು.

ಜನಪ್ರತಿನಿಧಿಯಾದವರಿಗೆ ಒಳ್ಳೆಯತನದ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆಯೂ ಬೇಕು. ಇಪ್ಪತೈದು ವರ್ಷಗಳಿಂದ ಆಗಿರುವ ಅಭಿವೃದ್ಧಿಯನ್ನು ಕ್ಷೇತ್ರದ ಜನತೆ ಗಮನಿಸಿದ್ದಾರೆ, ನಡಹಳ್ಳಿಯವರ ಅವಧಿಯಲ್ಲಾದ ಅಭಿವೃದ್ಧಿಯನ್ನೂ ನೋಡಿದ್ದಾರೆ. ಎಲ್ಲೊ ಒಂದು ಕಡೆ ಸಿಸಿ ರಸ್ತೆ ಬಿರುಕು ಬಿಟ್ಟಿದ್ದನ್ನೇ ಎತ್ತಿ ತೋರಿಸುವ ಕಾಂಗ್ರೆಸ್ ಮುಖಂಡರಿಗೆ ಹಳೇ ಸರಕಾರಿ ರಸ್ತೆಯಲ್ಲಿರುವ ಶೃಂಗಾರಗೌಡ ಪಾಟೀಲರ ಮನೆ ಮುಂದೆ ರಸ್ತೆ ಕಳಪೆಮಟ್ಟದ್ದಾಗಿದ್ದು ಕಂಡಿಲ್ಲವೇ ? ಏಪಿಎಂಸಿಯಲ್ಲಿ ಯಾವ ರೀತಿ ಕೆಲಸ ಮಾಡಲಾಗುತ್ತಿದೆ. ಯಾರು ಗುತ್ತಿಗೆದಾರರು ಇದ್ದಾರೆ ಎಂಬುದನ್ನು ಸ್ವಲ್ಪ ಬಿಡಿಸಿ ಹೇಳಬೇಕಿತ್ತು ಎಂದು ತಿಳಿಸಿದರು.

ಕವಡಿಮಟ್ಟಿ ಗ್ರಾಮಕ್ಕೆ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೆ ಸಿಎಂ ಬಂದಾಗ ಸೌಜನ್ಯಕ್ಕೂ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಸಲಿಲ್ಲ. ನಾಲತವಾಡ, ಮುದ್ದೇಬಿಹಾಳದಲ್ಲಿ ನಿರ್ಮಿಸಿರುವ ವೃತ್ತದಲ್ಲಿರುವ ಪುತ್ಥಳಿಗಳ ನಿರ್ಮಾಣದ ಕಾಮಗಾರಿಗೆ ಬಿಲ್ ಕೊಡದೇ ವಿಳಂಬ ಮಾಡಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದೀರಿ ಎಂದು ದೂರಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ಮಾಜಿ ಶಾಸಕ ನಡಹಳ್ಳಿಯವರು ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ನಾವು ಹೇಳುವುದಕ್ಕೆ ಇಲ್ಲಿ ಕೂತಿಲ್ಲ.ಹಾಲಿ ಶಾಸಕರು ಎಷ್ಟು ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕು ಎಂದರು.

ಸೈಟ್ ಬಗ್ಗೆ ಬಂದಿರುವ ಆರೋಪದ ಬಗ್ಗೆ ಜನತೆಗೆ ಉತ್ತರ ನೀಡಬೇಕು. ಅದು ಬಿಟ್ಟು ಅವರ ಹಿಂಬಾಲಕರನ್ನು ಮುಂದೆ ಮಾಡಿರುವುದು ಸೋಜಿಗದ ಸಂಗತಿ.ಅವರ ನಾಯಕರ ಪರ ಆ ಪಕ್ಷದ ಮುಖಂಡರು ಮಾತನಾಡಿದರೆ ನಮ್ಮ ಪಕ್ಷದ ನಾಯಕರ ಪರವಾಗಿ ನಾವು ಮಾತನಾಡಬೇಕಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮಣ ಬಿಜ್ಜೂರ, ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ ಮಾತನಾಡಿದರು.

ಇದನ್ನೂ ಓದಿ: Protest: ಯಡಹಳ್ಳಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ

ಮುಖಂಡರಾದ ಸೋಮನಗೌಡ ಬಿರಾದಾರ, ಸಂಜು ಬಾಗೇವಾಡಿ, ಶಂಕರಗೌಡ ಶಿವಣಗಿ, ಸುಭಾಷ್ ಕಟ್ಟಿಮನಿ, ನಾಗೇಶ ಕವಡಿಮಟ್ಟಿ, ಶೇಖರ ಢವಳಗಿ, ರೇವಣೆಪ್ಪ ಅಜಮನಿ, ಆನಂದ ಚವ್ಹಾಣ, ಶಿವಾನಂದ ಮಂಕಣಿ, ರವೀಂದ್ರ ಬಿರಾದಾರ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ