'Governors should give the answer, not their balangochis'-BJP leader's rant at press conference

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಮುದ್ದೇಬಿಹಾಳ : ‘ಸೈಟ್ ಅಕ್ರಮ ಖರೀದಿಯ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮಾಡಿರುವ ಆರೋಪದ ಬಗ್ಗೆ ಶಾಸಕ ನಾಡಗೌಡರೇ ಉತ್ತರ ಕೊಡಬೇಕೆ ಹೊರತು ಅವರ ಬಾಲಂಗೋಚಿಗಳಲ್ಲ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹಾಗೂ ಬಿಜೆಪಿ ಮುಖಂಡ ಹರೀಶ ನಾಟೀಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಾಲಿ ಶಾಸಕರು ತಂದಿರುವ ಅನುದಾನ ಎಷ್ಟು ಎಂಬುದನ್ನು ಆಧಾರ ಸಮೇತ ಕಾಂಗ್ರೆಸ್ಸಿಗರು ಮಾಧ್ಯಮವರಿಗೆ ವಿವರಿಸಬೇಕು. ಅದು ಬಿಟ್ಟು ಕೂಗಾಡುವುದು ಸುದ್ದಿಗೋಷ್ಠಿಯಲ್ಲ. ಅಷ್ಟಕ್ಕೂ ಆರೋಪ ಮಾಡಿದವರಿಗೆ ಆರೋಪ ಯಾರು ಹೊತ್ತಿದ್ದಾರೆಯೋ ಅವರು ಉತ್ತರ ಕೊಡಬೇಕಿತ್ತು. ಆದರೆ ಇಲ್ಲಿ ಕಾಂಗ್ರೆಸ್ ಮುಖಂಡರು, ದಾಖಲೆಗಳಿಲ್ಲದೇ ವಿನಾಕಾರಣ ಶಾಸಕರನ್ನು ಸಮರ್ಥನೆ ಮಾಡಿಕೊಳ್ಳಬೇಕು ಎಂಬ ಉದ್ದೇಶವೊಂದೇ ಇದೆ ಎಂದರು.

ಜನಪ್ರತಿನಿಧಿಯಾದವರಿಗೆ ಒಳ್ಳೆಯತನದ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆಯೂ ಬೇಕು. ಇಪ್ಪತೈದು ವರ್ಷಗಳಿಂದ ಆಗಿರುವ ಅಭಿವೃದ್ಧಿಯನ್ನು ಕ್ಷೇತ್ರದ ಜನತೆ ಗಮನಿಸಿದ್ದಾರೆ, ನಡಹಳ್ಳಿಯವರ ಅವಧಿಯಲ್ಲಾದ ಅಭಿವೃದ್ಧಿಯನ್ನೂ ನೋಡಿದ್ದಾರೆ. ಎಲ್ಲೊ ಒಂದು ಕಡೆ ಸಿಸಿ ರಸ್ತೆ ಬಿರುಕು ಬಿಟ್ಟಿದ್ದನ್ನೇ ಎತ್ತಿ ತೋರಿಸುವ ಕಾಂಗ್ರೆಸ್ ಮುಖಂಡರಿಗೆ ಹಳೇ ಸರಕಾರಿ ರಸ್ತೆಯಲ್ಲಿರುವ ಶೃಂಗಾರಗೌಡ ಪಾಟೀಲರ ಮನೆ ಮುಂದೆ ರಸ್ತೆ ಕಳಪೆಮಟ್ಟದ್ದಾಗಿದ್ದು ಕಂಡಿಲ್ಲವೇ ? ಏಪಿಎಂಸಿಯಲ್ಲಿ ಯಾವ ರೀತಿ ಕೆಲಸ ಮಾಡಲಾಗುತ್ತಿದೆ. ಯಾರು ಗುತ್ತಿಗೆದಾರರು ಇದ್ದಾರೆ ಎಂಬುದನ್ನು ಸ್ವಲ್ಪ ಬಿಡಿಸಿ ಹೇಳಬೇಕಿತ್ತು ಎಂದು ತಿಳಿಸಿದರು.

ಕವಡಿಮಟ್ಟಿ ಗ್ರಾಮಕ್ಕೆ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೆ ಸಿಎಂ ಬಂದಾಗ ಸೌಜನ್ಯಕ್ಕೂ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಸಲಿಲ್ಲ. ನಾಲತವಾಡ, ಮುದ್ದೇಬಿಹಾಳದಲ್ಲಿ ನಿರ್ಮಿಸಿರುವ ವೃತ್ತದಲ್ಲಿರುವ ಪುತ್ಥಳಿಗಳ ನಿರ್ಮಾಣದ ಕಾಮಗಾರಿಗೆ ಬಿಲ್ ಕೊಡದೇ ವಿಳಂಬ ಮಾಡಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದೀರಿ ಎಂದು ದೂರಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ಮಾಜಿ ಶಾಸಕ ನಡಹಳ್ಳಿಯವರು ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ನಾವು ಹೇಳುವುದಕ್ಕೆ ಇಲ್ಲಿ ಕೂತಿಲ್ಲ.ಹಾಲಿ ಶಾಸಕರು ಎಷ್ಟು ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕು ಎಂದರು.

ಸೈಟ್ ಬಗ್ಗೆ ಬಂದಿರುವ ಆರೋಪದ ಬಗ್ಗೆ ಜನತೆಗೆ ಉತ್ತರ ನೀಡಬೇಕು. ಅದು ಬಿಟ್ಟು ಅವರ ಹಿಂಬಾಲಕರನ್ನು ಮುಂದೆ ಮಾಡಿರುವುದು ಸೋಜಿಗದ ಸಂಗತಿ.ಅವರ ನಾಯಕರ ಪರ ಆ ಪಕ್ಷದ ಮುಖಂಡರು ಮಾತನಾಡಿದರೆ ನಮ್ಮ ಪಕ್ಷದ ನಾಯಕರ ಪರವಾಗಿ ನಾವು ಮಾತನಾಡಬೇಕಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮಣ ಬಿಜ್ಜೂರ, ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ ಮಾತನಾಡಿದರು.

ಇದನ್ನೂ ಓದಿ: Protest: ಯಡಹಳ್ಳಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ

ಮುಖಂಡರಾದ ಸೋಮನಗೌಡ ಬಿರಾದಾರ, ಸಂಜು ಬಾಗೇವಾಡಿ, ಶಂಕರಗೌಡ ಶಿವಣಗಿ, ಸುಭಾಷ್ ಕಟ್ಟಿಮನಿ, ನಾಗೇಶ ಕವಡಿಮಟ್ಟಿ, ಶೇಖರ ಢವಳಗಿ, ರೇವಣೆಪ್ಪ ಅಜಮನಿ, ಆನಂದ ಚವ್ಹಾಣ, ಶಿವಾನಂದ ಮಂಕಣಿ, ರವೀಂದ್ರ ಬಿರಾದಾರ ಇದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600