Govt's Mock Funeral: Protest by Madiga Community for Internal Reservation

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಅಣಕು ಶವಯಾತ್ರೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.

ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಸಿಎಂ ಸಿದ್ಧರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸದ ಗೋವಿಂದ ಕಾರಜೋಳ ಅವರು ತಮ್ಮ ಸರ್ಕಾರ ಇದ್ದಾಗ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲಿ. ನಮ್ಮ ಸಮಾಜದ ಎಮ್.ಎಲ್.ಎ, ಎಂಪಿಗಳು ಸಮಾಜವನ್ನು ಸರ್ಕಾರಗಳ ಮುಂದೆ ಅಡ ಇಟ್ಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಮಾರುತಿ ಸಿದ್ಧಾಪೂರ ಮಾತನಾಡಿ, ಮೀಸಲಾತಿ ಹೆಸರಿನಲ್ಲಿ ಬಲಾಢ್ಯ ಸಮುದಾಯದವರು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಕೊಟ್ಟ ಆಶ್ವಾಸನೆಯನ್ನು ಈಡೇರಿಸಲು ಈ ಸರ್ಕಾರಕ್ಕೆ ಆಗಿಲ್ಲ.ರಾಜಕಾರಣಿಗಳು ನಮ್ಮ ಸಮುದಾಯದ ಪರ ಇಲ್ಲ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ತಮ್ಮದೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ಒಳಮೀಸಲು ಜಾರಿ ಬಗ್ಗೆ ಖರ್ಗೆ ರಾಹುಲ್ ಹೆಸರು ಹೇಳಿದರೆ, ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ ಹೆಸರು ಹೇಳುತ್ತಾರೆ. ಒಬ್ಬರ ಮೇಲೊಬ್ಬರು ಹಾಕುತ್ತಾ ಒಳಮೀಸಲು ಕಲ್ಪಿಸುವುದಕ್ಕೆ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ಮುಖಂಡ ದುರಗಪ್ಪ ದೊಡಮನಿ ಮಾತನಾಡಿ, ಸಂವಿಧಾನದ ಆಶಯದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿಲ್ಲ. ನಮ್ಮ ಸಮುದಾಯಕ್ಕೆ ನಿಜವಾದ ನಾಯಕರು ಮಾತ್ರ ಹೋರಾಟಕ್ಕೆ ಬರಲಿ. ಒಳಮೀಸಲು ಪರ ಎನ್ನುತ್ತಾ ಬ್ರಿಟಿಷರಂತೆ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಮಾದಿಗ ಸಮುದಾಯವನ್ನು ಕಳೆದ 35 ವರ್ಷಗಳಿಂದ ವಂಚಿಸಿದ್ದಾರೆ ಎಂದು ದೂರಿದರು.

ಮುಖಂಡರಾದ ಬಾಲಚಂದ್ರ ಹುಲ್ಲೂರ , ಶೇಖಪ್ಪ ಮಾದರ, ಆನಂದ ಮುದೂರ ಮಾತನಾಡಿದರು. ತಹಸೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಕೀಲರಾದ ಪಿ.ಬಿ.ಮ್ಯಾಗೇರಿ ಮನವಿ ಪತ್ರ ಓದಿದರು. ವಕೀಲ ಮಹೇಶ ದೊಡಮನಿ, ರಮೇಶ ತಳವಾರ, ಮಲ್ಲಪ್ಪ ಬಸರಕೋಡ, ನೀಲಪ್ಪ ಸಿದ್ದಾಪೂರ, ಡಿ.ಡಿ.ಯರಝೇರಿ, ಮುತ್ತು ಅಮರಗೋಳ, ಮಾರುತಿ ಧನ್ನೂರ, ಕಾಳಪ್ಪ ಅರ್ಜಿ, ಪ್ರಭು ತಳಗೆ, ಲಕ್ಷ್ಮಣ ಕಾಳಗಿ, ಪರಶು ನಾಗೂರು, ಮುತ್ತು ಸಿದ್ದಾಪೂರ, ಶಂಕ್ರಪ್ಪ ತಂಗಡಗಿ, ಬಸವರಾಜ ಅರಸನಾಳ, ಮಾಯಮ್ಮ ಮಾದರ, ಶಿಲ್ಪಾ ಮಾದರ, ನೀಲಮ್ಮ ಮಾದರ ಇದ್ದರು. ಮುಂಜಾಗ್ರತಾ ಕ್ರಮವಾಗಿ ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊಂದಿಗೆ ಭದ್ರತೆ ಒದಗಿಸಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ