Govt's Mock Funeral: Protest by Madiga Community for Internal Reservation

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಅಣಕು ಶವಯಾತ್ರೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.

ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಸಿಎಂ ಸಿದ್ಧರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸದ ಗೋವಿಂದ ಕಾರಜೋಳ ಅವರು ತಮ್ಮ ಸರ್ಕಾರ ಇದ್ದಾಗ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲಿ. ನಮ್ಮ ಸಮಾಜದ ಎಮ್.ಎಲ್.ಎ, ಎಂಪಿಗಳು ಸಮಾಜವನ್ನು ಸರ್ಕಾರಗಳ ಮುಂದೆ ಅಡ ಇಟ್ಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಮಾರುತಿ ಸಿದ್ಧಾಪೂರ ಮಾತನಾಡಿ, ಮೀಸಲಾತಿ ಹೆಸರಿನಲ್ಲಿ ಬಲಾಢ್ಯ ಸಮುದಾಯದವರು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಕೊಟ್ಟ ಆಶ್ವಾಸನೆಯನ್ನು ಈಡೇರಿಸಲು ಈ ಸರ್ಕಾರಕ್ಕೆ ಆಗಿಲ್ಲ.ರಾಜಕಾರಣಿಗಳು ನಮ್ಮ ಸಮುದಾಯದ ಪರ ಇಲ್ಲ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ತಮ್ಮದೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ಒಳಮೀಸಲು ಜಾರಿ ಬಗ್ಗೆ ಖರ್ಗೆ ರಾಹುಲ್ ಹೆಸರು ಹೇಳಿದರೆ, ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ ಹೆಸರು ಹೇಳುತ್ತಾರೆ. ಒಬ್ಬರ ಮೇಲೊಬ್ಬರು ಹಾಕುತ್ತಾ ಒಳಮೀಸಲು ಕಲ್ಪಿಸುವುದಕ್ಕೆ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ಮುಖಂಡ ದುರಗಪ್ಪ ದೊಡಮನಿ ಮಾತನಾಡಿ, ಸಂವಿಧಾನದ ಆಶಯದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿಲ್ಲ. ನಮ್ಮ ಸಮುದಾಯಕ್ಕೆ ನಿಜವಾದ ನಾಯಕರು ಮಾತ್ರ ಹೋರಾಟಕ್ಕೆ ಬರಲಿ. ಒಳಮೀಸಲು ಪರ ಎನ್ನುತ್ತಾ ಬ್ರಿಟಿಷರಂತೆ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಮಾದಿಗ ಸಮುದಾಯವನ್ನು ಕಳೆದ 35 ವರ್ಷಗಳಿಂದ ವಂಚಿಸಿದ್ದಾರೆ ಎಂದು ದೂರಿದರು.

ಮುಖಂಡರಾದ ಬಾಲಚಂದ್ರ ಹುಲ್ಲೂರ , ಶೇಖಪ್ಪ ಮಾದರ, ಆನಂದ ಮುದೂರ ಮಾತನಾಡಿದರು. ತಹಸೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಕೀಲರಾದ ಪಿ.ಬಿ.ಮ್ಯಾಗೇರಿ ಮನವಿ ಪತ್ರ ಓದಿದರು. ವಕೀಲ ಮಹೇಶ ದೊಡಮನಿ, ರಮೇಶ ತಳವಾರ, ಮಲ್ಲಪ್ಪ ಬಸರಕೋಡ, ನೀಲಪ್ಪ ಸಿದ್ದಾಪೂರ, ಡಿ.ಡಿ.ಯರಝೇರಿ, ಮುತ್ತು ಅಮರಗೋಳ, ಮಾರುತಿ ಧನ್ನೂರ, ಕಾಳಪ್ಪ ಅರ್ಜಿ, ಪ್ರಭು ತಳಗೆ, ಲಕ್ಷ್ಮಣ ಕಾಳಗಿ, ಪರಶು ನಾಗೂರು, ಮುತ್ತು ಸಿದ್ದಾಪೂರ, ಶಂಕ್ರಪ್ಪ ತಂಗಡಗಿ, ಬಸವರಾಜ ಅರಸನಾಳ, ಮಾಯಮ್ಮ ಮಾದರ, ಶಿಲ್ಪಾ ಮಾದರ, ನೀಲಮ್ಮ ಮಾದರ ಇದ್ದರು. ಮುಂಜಾಗ್ರತಾ ಕ್ರಮವಾಗಿ ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊಂದಿಗೆ ಭದ್ರತೆ ಒದಗಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ