Govt's Mock Funeral: Protest by Madiga Community for Internal Reservation

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಅಣಕು ಶವಯಾತ್ರೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.

ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಸಿಎಂ ಸಿದ್ಧರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸದ ಗೋವಿಂದ ಕಾರಜೋಳ ಅವರು ತಮ್ಮ ಸರ್ಕಾರ ಇದ್ದಾಗ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲಿ. ನಮ್ಮ ಸಮಾಜದ ಎಮ್.ಎಲ್.ಎ, ಎಂಪಿಗಳು ಸಮಾಜವನ್ನು ಸರ್ಕಾರಗಳ ಮುಂದೆ ಅಡ ಇಟ್ಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಮಾರುತಿ ಸಿದ್ಧಾಪೂರ ಮಾತನಾಡಿ, ಮೀಸಲಾತಿ ಹೆಸರಿನಲ್ಲಿ ಬಲಾಢ್ಯ ಸಮುದಾಯದವರು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಕೊಟ್ಟ ಆಶ್ವಾಸನೆಯನ್ನು ಈಡೇರಿಸಲು ಈ ಸರ್ಕಾರಕ್ಕೆ ಆಗಿಲ್ಲ.ರಾಜಕಾರಣಿಗಳು ನಮ್ಮ ಸಮುದಾಯದ ಪರ ಇಲ್ಲ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ತಮ್ಮದೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ಒಳಮೀಸಲು ಜಾರಿ ಬಗ್ಗೆ ಖರ್ಗೆ ರಾಹುಲ್ ಹೆಸರು ಹೇಳಿದರೆ, ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ ಹೆಸರು ಹೇಳುತ್ತಾರೆ. ಒಬ್ಬರ ಮೇಲೊಬ್ಬರು ಹಾಕುತ್ತಾ ಒಳಮೀಸಲು ಕಲ್ಪಿಸುವುದಕ್ಕೆ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ಮುಖಂಡ ದುರಗಪ್ಪ ದೊಡಮನಿ ಮಾತನಾಡಿ, ಸಂವಿಧಾನದ ಆಶಯದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿಲ್ಲ. ನಮ್ಮ ಸಮುದಾಯಕ್ಕೆ ನಿಜವಾದ ನಾಯಕರು ಮಾತ್ರ ಹೋರಾಟಕ್ಕೆ ಬರಲಿ. ಒಳಮೀಸಲು ಪರ ಎನ್ನುತ್ತಾ ಬ್ರಿಟಿಷರಂತೆ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಮಾದಿಗ ಸಮುದಾಯವನ್ನು ಕಳೆದ 35 ವರ್ಷಗಳಿಂದ ವಂಚಿಸಿದ್ದಾರೆ ಎಂದು ದೂರಿದರು.

ಮುಖಂಡರಾದ ಬಾಲಚಂದ್ರ ಹುಲ್ಲೂರ , ಶೇಖಪ್ಪ ಮಾದರ, ಆನಂದ ಮುದೂರ ಮಾತನಾಡಿದರು. ತಹಸೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಕೀಲರಾದ ಪಿ.ಬಿ.ಮ್ಯಾಗೇರಿ ಮನವಿ ಪತ್ರ ಓದಿದರು. ವಕೀಲ ಮಹೇಶ ದೊಡಮನಿ, ರಮೇಶ ತಳವಾರ, ಮಲ್ಲಪ್ಪ ಬಸರಕೋಡ, ನೀಲಪ್ಪ ಸಿದ್ದಾಪೂರ, ಡಿ.ಡಿ.ಯರಝೇರಿ, ಮುತ್ತು ಅಮರಗೋಳ, ಮಾರುತಿ ಧನ್ನೂರ, ಕಾಳಪ್ಪ ಅರ್ಜಿ, ಪ್ರಭು ತಳಗೆ, ಲಕ್ಷ್ಮಣ ಕಾಳಗಿ, ಪರಶು ನಾಗೂರು, ಮುತ್ತು ಸಿದ್ದಾಪೂರ, ಶಂಕ್ರಪ್ಪ ತಂಗಡಗಿ, ಬಸವರಾಜ ಅರಸನಾಳ, ಮಾಯಮ್ಮ ಮಾದರ, ಶಿಲ್ಪಾ ಮಾದರ, ನೀಲಮ್ಮ ಮಾದರ ಇದ್ದರು. ಮುಂಜಾಗ್ರತಾ ಕ್ರಮವಾಗಿ ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊಂದಿಗೆ ಭದ್ರತೆ ಒದಗಿಸಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ