Gramdevate Jatrotsava: Weed growing art troupes

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಇಲ್ಲಿನ ಕಿಲ್ಲಾದ ಹೊಸಮಠದಲ್ಲಿ ದ್ಯಾಮವ್ವ ದೇವಿ ಹಾಗೂ ಶಾರದಾ ದೇವಿಯರ ಮೂರ್ತಿ ಮೆರವಣಿಗೆಗೆ ಚಾಲನೆ ದೊರೆಯುವ ಮೂಲಕ ಐದು ದಿನಗಳ ಜಾತ್ರೆಗೆ ವಿದ್ಯುಕ್ತವಾಗಿ ಪ್ರಾರಂಭಗೊಂಡಿತು.

ಪಟ್ಟಣದ ಕಿಲ್ಲಾದಿಂದ ಜಾತ್ರೋತ್ಸವದ ಮೂಲ ಬಾಬುದಾರರಾದ ನಾಡಗೌಡ, ರಾಯನಗೌಡ, ನಡಿಗೇರಿ ಕುಟುಂಬದವರು ಆರುತಿ ಬೆಳಗುವ ಮೂಲಕ ಮೆರವಣಿಗೆಗೆ ಚಾಲನೆ ದೊರೆಯಿತು.

ಮೆರವಣಿಗೆಯಲ್ಲಿ ಚಿತ್ರದುರ್ಗದ ವೀರಗಾಸೆ, ಚಿಕ್ಕಮಂಗಳೂರಿನ ಮಹಿಳಾ ವೀರಗಾಸೆ, ಚಿತ್ರದುರ್ಗದ ಕೋಳಿ ಕುಣಿತ ಮತ್ತು ಚಿಲಿಪಿಲಿ ಗೊಂಬೆ ಕುಣಿತ, ವಿಜಯನಗರದ ನಂದಿಕೋಲು ಕುಣಿತ, ಮಂಗಳೂರಿನ ಚಂಡಿಕಾವಾದ್ಯ, ಮಂಗಳೂರಿನ ಹುಲಿ ವೇಷ ಕುಣಿತ, ಕೊಣ್ಣೂರಿನ ಮಹಿಳಾ ಡೊಳ್ಳು ಕುಣಿತ, ಹಿರೂರಿನ ಕರಡಿ ಮಜಲು, ಸ್ಥಳೀಯ ಸನಾದಿ, ಬ್ಯಾಂಡ್‌ಸೆಟ್, ಕುದುರೆ ಕುಣಿತ, ಒಂಟೆ, ಹಲಗಿ ಮೇಳ, ಜೋಗತಿ ನೃತ್ಯ ಹಾಗೂ ಕಲಾ ತಂಡಗಳು ಹಾಗೂ ಕುಂಭ ಹೊತ್ತಿದ್ದ ನೂರಾರು ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದ್ದರು.

ಮೆರವಣಿಗೆಯಲ್ಲಿ ನಾಡಗೌಡ ಮನೆತನದ ಜೊತೆಗೆ ನಿಕಟ ಸಂಬಂಧ ಹೊಂದಿರುವ ವಿವಿಧ ಸೇವಾಕರ್ತರು, ಬಾಬುದಾರರು ಆಯುಧಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಹೊಸಮಠದಿಂದ ಆರಂಭಗೊಂಡ ಮೆರವಣಿಗೆ ಟಿಪ್ಪು ಸರ್ಕಲ್,ಸರಾಫ ಬಜಾರ ಮಾರ್ಗ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತ, ಗಣಪತಿ ದೇವಸ್ಥಾನ, ರಾಘವೇಂದ್ರ ಸ್ವಾಮಿಗಳ ಮಠ, ವಾಲ್ಮೀಕಿ ವೃತ್ತ, ಶಾರದಾ ದೇವಿ ಗುಡಿ, ಲಕ್ಷ್ಮಿ ವೆಂಕಟೇಶ್ವರ ಗುಡಿ ಮಾರ್ಗವಾಗಿ ದ್ಯಾಮವ್ವನ ಕಟ್ಟೆಗೆ ಸಾಗಿ ದೇವಿಯವರನ್ನು ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯಲ್ಲಿ ಜಾತ್ರಾ ಕಮೀಟಿಯ ಪದಾಧಿಕಾರಿಗಳು, ಊರಿನ ಗಣ್ಯರು, ಸಂಘ ಸಂಸ್ಥೆಯ ಮುಖಂಡರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು: ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಸೇರಿದಂತೆ ಹಲವು ಮುಸ್ಲಿಂ ಸಮಾಜದ ಮುಖಂಡರು ಗ್ರಾಮದೇವತೆ ಜಾತ್ರೆಯಲ್ಲಿ ಭಾಗಿಯಾಗಿದ್ದಲ್ಲದೇ ಚಿತ್ರದುರ್ಗದ ಚಂಡಿಕಾವಾದ್ಯ ವಾದನಕ್ಕೆ ಹೆಜ್ಜೆ ಹಾಕಿ ಕೋಮು ಸಾಮರಸ್ಯ ಮೆರೆದರು.

ಡಿಜೆ ಅಬ್ಬರದಲ್ಲಿ ಕುಂದಿದ ಸಾಂಪ್ರದಾಯಿಕ ವಾದನಗಳ ಮೆರಗು:
ಪಟ್ಟಣದ ಹೊಸಮಠದಿಂದ ಆರಂಭಗೊಂಡಿದ್ದ ಮೆರವಣಿಗೆಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ವಿಜಯನಗರ, ಕೊಣ್ಣೂರು ಮೊದಲಾದ ದೂರದ ಊರುಗಳಿಂದ ಆಗಮಿಸಿದ್ದ ಸಾಂಪ್ರದಾಯಿಕ ವಾದನಗಳ ತಾಳವು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು. ಉತ್ಸಾಹದಿಂದಲೇ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಆಯಾ ವಾದನಗಳಿಗೆ ಹೆಜ್ಜೆ ಹಾಕುವುದು ಕಂಡು ಬಂದಿತು. ಹಳೇ ತಹಸೀಲ್ದಾರ್ ಕಚೇರಿ ಬಳಿ ಡಿಜೆ ಅಬ್ಬರದ ಸಪ್ಪಳದಲ್ಲಿ ಸಾಂಪ್ರದಾಯಿಕ ವಾದನಗಳ ಕಳೆ ಕುಂದುವಂತಾಯಿತು. ಡಿಜೆ ಸಂಗೀತಕ್ಕೆ ಯುವಕರು ಹುಚ್ಚೆದ್ದು ಕುಣಿದರು.

ಭಾರೀ ಪೊಲೀಸ್ ಭದ್ರತೆ: ಗ್ರಾಮದೇವತೆ ಜಾತ್ರೆಯ ಅಂಗವಾಗಿ ಸಿಪಿಐ ಮೊಹ್ಮದಫಸಿವುದ್ದೀನ ನೇತೃತ್ವದಲ್ಲಿ ಪಿಎಸ್‌ಐ ಸಂಜಯ ತಿಪರೆಡ್ಡಿ, ಸುರೇಶ ಮಂಟೂರ, ರಾಮನಗೌಡ ಸಂಕನಾಳ ಸೇರಿದಂತೆ ತಾಳಿಕೋಟಿ, ನಿಡಗುಂದಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ