Gramdevate Jatrotsava: Weed growing art troupes

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಇಲ್ಲಿನ ಕಿಲ್ಲಾದ ಹೊಸಮಠದಲ್ಲಿ ದ್ಯಾಮವ್ವ ದೇವಿ ಹಾಗೂ ಶಾರದಾ ದೇವಿಯರ ಮೂರ್ತಿ ಮೆರವಣಿಗೆಗೆ ಚಾಲನೆ ದೊರೆಯುವ ಮೂಲಕ ಐದು ದಿನಗಳ ಜಾತ್ರೆಗೆ ವಿದ್ಯುಕ್ತವಾಗಿ ಪ್ರಾರಂಭಗೊಂಡಿತು.

ಪಟ್ಟಣದ ಕಿಲ್ಲಾದಿಂದ ಜಾತ್ರೋತ್ಸವದ ಮೂಲ ಬಾಬುದಾರರಾದ ನಾಡಗೌಡ, ರಾಯನಗೌಡ, ನಡಿಗೇರಿ ಕುಟುಂಬದವರು ಆರುತಿ ಬೆಳಗುವ ಮೂಲಕ ಮೆರವಣಿಗೆಗೆ ಚಾಲನೆ ದೊರೆಯಿತು.

ಮೆರವಣಿಗೆಯಲ್ಲಿ ಚಿತ್ರದುರ್ಗದ ವೀರಗಾಸೆ, ಚಿಕ್ಕಮಂಗಳೂರಿನ ಮಹಿಳಾ ವೀರಗಾಸೆ, ಚಿತ್ರದುರ್ಗದ ಕೋಳಿ ಕುಣಿತ ಮತ್ತು ಚಿಲಿಪಿಲಿ ಗೊಂಬೆ ಕುಣಿತ, ವಿಜಯನಗರದ ನಂದಿಕೋಲು ಕುಣಿತ, ಮಂಗಳೂರಿನ ಚಂಡಿಕಾವಾದ್ಯ, ಮಂಗಳೂರಿನ ಹುಲಿ ವೇಷ ಕುಣಿತ, ಕೊಣ್ಣೂರಿನ ಮಹಿಳಾ ಡೊಳ್ಳು ಕುಣಿತ, ಹಿರೂರಿನ ಕರಡಿ ಮಜಲು, ಸ್ಥಳೀಯ ಸನಾದಿ, ಬ್ಯಾಂಡ್‌ಸೆಟ್, ಕುದುರೆ ಕುಣಿತ, ಒಂಟೆ, ಹಲಗಿ ಮೇಳ, ಜೋಗತಿ ನೃತ್ಯ ಹಾಗೂ ಕಲಾ ತಂಡಗಳು ಹಾಗೂ ಕುಂಭ ಹೊತ್ತಿದ್ದ ನೂರಾರು ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದ್ದರು.

ಮೆರವಣಿಗೆಯಲ್ಲಿ ನಾಡಗೌಡ ಮನೆತನದ ಜೊತೆಗೆ ನಿಕಟ ಸಂಬಂಧ ಹೊಂದಿರುವ ವಿವಿಧ ಸೇವಾಕರ್ತರು, ಬಾಬುದಾರರು ಆಯುಧಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಹೊಸಮಠದಿಂದ ಆರಂಭಗೊಂಡ ಮೆರವಣಿಗೆ ಟಿಪ್ಪು ಸರ್ಕಲ್,ಸರಾಫ ಬಜಾರ ಮಾರ್ಗ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತ, ಗಣಪತಿ ದೇವಸ್ಥಾನ, ರಾಘವೇಂದ್ರ ಸ್ವಾಮಿಗಳ ಮಠ, ವಾಲ್ಮೀಕಿ ವೃತ್ತ, ಶಾರದಾ ದೇವಿ ಗುಡಿ, ಲಕ್ಷ್ಮಿ ವೆಂಕಟೇಶ್ವರ ಗುಡಿ ಮಾರ್ಗವಾಗಿ ದ್ಯಾಮವ್ವನ ಕಟ್ಟೆಗೆ ಸಾಗಿ ದೇವಿಯವರನ್ನು ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯಲ್ಲಿ ಜಾತ್ರಾ ಕಮೀಟಿಯ ಪದಾಧಿಕಾರಿಗಳು, ಊರಿನ ಗಣ್ಯರು, ಸಂಘ ಸಂಸ್ಥೆಯ ಮುಖಂಡರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು: ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಸೇರಿದಂತೆ ಹಲವು ಮುಸ್ಲಿಂ ಸಮಾಜದ ಮುಖಂಡರು ಗ್ರಾಮದೇವತೆ ಜಾತ್ರೆಯಲ್ಲಿ ಭಾಗಿಯಾಗಿದ್ದಲ್ಲದೇ ಚಿತ್ರದುರ್ಗದ ಚಂಡಿಕಾವಾದ್ಯ ವಾದನಕ್ಕೆ ಹೆಜ್ಜೆ ಹಾಕಿ ಕೋಮು ಸಾಮರಸ್ಯ ಮೆರೆದರು.

ಡಿಜೆ ಅಬ್ಬರದಲ್ಲಿ ಕುಂದಿದ ಸಾಂಪ್ರದಾಯಿಕ ವಾದನಗಳ ಮೆರಗು:
ಪಟ್ಟಣದ ಹೊಸಮಠದಿಂದ ಆರಂಭಗೊಂಡಿದ್ದ ಮೆರವಣಿಗೆಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ವಿಜಯನಗರ, ಕೊಣ್ಣೂರು ಮೊದಲಾದ ದೂರದ ಊರುಗಳಿಂದ ಆಗಮಿಸಿದ್ದ ಸಾಂಪ್ರದಾಯಿಕ ವಾದನಗಳ ತಾಳವು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು. ಉತ್ಸಾಹದಿಂದಲೇ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಆಯಾ ವಾದನಗಳಿಗೆ ಹೆಜ್ಜೆ ಹಾಕುವುದು ಕಂಡು ಬಂದಿತು. ಹಳೇ ತಹಸೀಲ್ದಾರ್ ಕಚೇರಿ ಬಳಿ ಡಿಜೆ ಅಬ್ಬರದ ಸಪ್ಪಳದಲ್ಲಿ ಸಾಂಪ್ರದಾಯಿಕ ವಾದನಗಳ ಕಳೆ ಕುಂದುವಂತಾಯಿತು. ಡಿಜೆ ಸಂಗೀತಕ್ಕೆ ಯುವಕರು ಹುಚ್ಚೆದ್ದು ಕುಣಿದರು.

ಭಾರೀ ಪೊಲೀಸ್ ಭದ್ರತೆ: ಗ್ರಾಮದೇವತೆ ಜಾತ್ರೆಯ ಅಂಗವಾಗಿ ಸಿಪಿಐ ಮೊಹ್ಮದಫಸಿವುದ್ದೀನ ನೇತೃತ್ವದಲ್ಲಿ ಪಿಎಸ್‌ಐ ಸಂಜಯ ತಿಪರೆಡ್ಡಿ, ಸುರೇಶ ಮಂಟೂರ, ರಾಮನಗೌಡ ಸಂಕನಾಳ ಸೇರಿದಂತೆ ತಾಳಿಕೋಟಿ, ನಿಡಗುಂದಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ