Gramdevate Jatrotsava: Weed growing art troupes

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಇಲ್ಲಿನ ಕಿಲ್ಲಾದ ಹೊಸಮಠದಲ್ಲಿ ದ್ಯಾಮವ್ವ ದೇವಿ ಹಾಗೂ ಶಾರದಾ ದೇವಿಯರ ಮೂರ್ತಿ ಮೆರವಣಿಗೆಗೆ ಚಾಲನೆ ದೊರೆಯುವ ಮೂಲಕ ಐದು ದಿನಗಳ ಜಾತ್ರೆಗೆ ವಿದ್ಯುಕ್ತವಾಗಿ ಪ್ರಾರಂಭಗೊಂಡಿತು.

ಪಟ್ಟಣದ ಕಿಲ್ಲಾದಿಂದ ಜಾತ್ರೋತ್ಸವದ ಮೂಲ ಬಾಬುದಾರರಾದ ನಾಡಗೌಡ, ರಾಯನಗೌಡ, ನಡಿಗೇರಿ ಕುಟುಂಬದವರು ಆರುತಿ ಬೆಳಗುವ ಮೂಲಕ ಮೆರವಣಿಗೆಗೆ ಚಾಲನೆ ದೊರೆಯಿತು.

ಮೆರವಣಿಗೆಯಲ್ಲಿ ಚಿತ್ರದುರ್ಗದ ವೀರಗಾಸೆ, ಚಿಕ್ಕಮಂಗಳೂರಿನ ಮಹಿಳಾ ವೀರಗಾಸೆ, ಚಿತ್ರದುರ್ಗದ ಕೋಳಿ ಕುಣಿತ ಮತ್ತು ಚಿಲಿಪಿಲಿ ಗೊಂಬೆ ಕುಣಿತ, ವಿಜಯನಗರದ ನಂದಿಕೋಲು ಕುಣಿತ, ಮಂಗಳೂರಿನ ಚಂಡಿಕಾವಾದ್ಯ, ಮಂಗಳೂರಿನ ಹುಲಿ ವೇಷ ಕುಣಿತ, ಕೊಣ್ಣೂರಿನ ಮಹಿಳಾ ಡೊಳ್ಳು ಕುಣಿತ, ಹಿರೂರಿನ ಕರಡಿ ಮಜಲು, ಸ್ಥಳೀಯ ಸನಾದಿ, ಬ್ಯಾಂಡ್‌ಸೆಟ್, ಕುದುರೆ ಕುಣಿತ, ಒಂಟೆ, ಹಲಗಿ ಮೇಳ, ಜೋಗತಿ ನೃತ್ಯ ಹಾಗೂ ಕಲಾ ತಂಡಗಳು ಹಾಗೂ ಕುಂಭ ಹೊತ್ತಿದ್ದ ನೂರಾರು ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದ್ದರು.

ಮೆರವಣಿಗೆಯಲ್ಲಿ ನಾಡಗೌಡ ಮನೆತನದ ಜೊತೆಗೆ ನಿಕಟ ಸಂಬಂಧ ಹೊಂದಿರುವ ವಿವಿಧ ಸೇವಾಕರ್ತರು, ಬಾಬುದಾರರು ಆಯುಧಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಹೊಸಮಠದಿಂದ ಆರಂಭಗೊಂಡ ಮೆರವಣಿಗೆ ಟಿಪ್ಪು ಸರ್ಕಲ್,ಸರಾಫ ಬಜಾರ ಮಾರ್ಗ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತ, ಗಣಪತಿ ದೇವಸ್ಥಾನ, ರಾಘವೇಂದ್ರ ಸ್ವಾಮಿಗಳ ಮಠ, ವಾಲ್ಮೀಕಿ ವೃತ್ತ, ಶಾರದಾ ದೇವಿ ಗುಡಿ, ಲಕ್ಷ್ಮಿ ವೆಂಕಟೇಶ್ವರ ಗುಡಿ ಮಾರ್ಗವಾಗಿ ದ್ಯಾಮವ್ವನ ಕಟ್ಟೆಗೆ ಸಾಗಿ ದೇವಿಯವರನ್ನು ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯಲ್ಲಿ ಜಾತ್ರಾ ಕಮೀಟಿಯ ಪದಾಧಿಕಾರಿಗಳು, ಊರಿನ ಗಣ್ಯರು, ಸಂಘ ಸಂಸ್ಥೆಯ ಮುಖಂಡರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು: ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಸೇರಿದಂತೆ ಹಲವು ಮುಸ್ಲಿಂ ಸಮಾಜದ ಮುಖಂಡರು ಗ್ರಾಮದೇವತೆ ಜಾತ್ರೆಯಲ್ಲಿ ಭಾಗಿಯಾಗಿದ್ದಲ್ಲದೇ ಚಿತ್ರದುರ್ಗದ ಚಂಡಿಕಾವಾದ್ಯ ವಾದನಕ್ಕೆ ಹೆಜ್ಜೆ ಹಾಕಿ ಕೋಮು ಸಾಮರಸ್ಯ ಮೆರೆದರು.

ಡಿಜೆ ಅಬ್ಬರದಲ್ಲಿ ಕುಂದಿದ ಸಾಂಪ್ರದಾಯಿಕ ವಾದನಗಳ ಮೆರಗು:
ಪಟ್ಟಣದ ಹೊಸಮಠದಿಂದ ಆರಂಭಗೊಂಡಿದ್ದ ಮೆರವಣಿಗೆಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ವಿಜಯನಗರ, ಕೊಣ್ಣೂರು ಮೊದಲಾದ ದೂರದ ಊರುಗಳಿಂದ ಆಗಮಿಸಿದ್ದ ಸಾಂಪ್ರದಾಯಿಕ ವಾದನಗಳ ತಾಳವು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು. ಉತ್ಸಾಹದಿಂದಲೇ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಆಯಾ ವಾದನಗಳಿಗೆ ಹೆಜ್ಜೆ ಹಾಕುವುದು ಕಂಡು ಬಂದಿತು. ಹಳೇ ತಹಸೀಲ್ದಾರ್ ಕಚೇರಿ ಬಳಿ ಡಿಜೆ ಅಬ್ಬರದ ಸಪ್ಪಳದಲ್ಲಿ ಸಾಂಪ್ರದಾಯಿಕ ವಾದನಗಳ ಕಳೆ ಕುಂದುವಂತಾಯಿತು. ಡಿಜೆ ಸಂಗೀತಕ್ಕೆ ಯುವಕರು ಹುಚ್ಚೆದ್ದು ಕುಣಿದರು.

ಭಾರೀ ಪೊಲೀಸ್ ಭದ್ರತೆ: ಗ್ರಾಮದೇವತೆ ಜಾತ್ರೆಯ ಅಂಗವಾಗಿ ಸಿಪಿಐ ಮೊಹ್ಮದಫಸಿವುದ್ದೀನ ನೇತೃತ್ವದಲ್ಲಿ ಪಿಎಸ್‌ಐ ಸಂಜಯ ತಿಪರೆಡ್ಡಿ, ಸುರೇಶ ಮಂಟೂರ, ರಾಮನಗೌಡ ಸಂಕನಾಳ ಸೇರಿದಂತೆ ತಾಳಿಕೋಟಿ, ನಿಡಗುಂದಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ