Gramdevate Jatrotsava: Weed growing art troupes

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಇಲ್ಲಿನ ಕಿಲ್ಲಾದ ಹೊಸಮಠದಲ್ಲಿ ದ್ಯಾಮವ್ವ ದೇವಿ ಹಾಗೂ ಶಾರದಾ ದೇವಿಯರ ಮೂರ್ತಿ ಮೆರವಣಿಗೆಗೆ ಚಾಲನೆ ದೊರೆಯುವ ಮೂಲಕ ಐದು ದಿನಗಳ ಜಾತ್ರೆಗೆ ವಿದ್ಯುಕ್ತವಾಗಿ ಪ್ರಾರಂಭಗೊಂಡಿತು.

ಪಟ್ಟಣದ ಕಿಲ್ಲಾದಿಂದ ಜಾತ್ರೋತ್ಸವದ ಮೂಲ ಬಾಬುದಾರರಾದ ನಾಡಗೌಡ, ರಾಯನಗೌಡ, ನಡಿಗೇರಿ ಕುಟುಂಬದವರು ಆರುತಿ ಬೆಳಗುವ ಮೂಲಕ ಮೆರವಣಿಗೆಗೆ ಚಾಲನೆ ದೊರೆಯಿತು.

ಮೆರವಣಿಗೆಯಲ್ಲಿ ಚಿತ್ರದುರ್ಗದ ವೀರಗಾಸೆ, ಚಿಕ್ಕಮಂಗಳೂರಿನ ಮಹಿಳಾ ವೀರಗಾಸೆ, ಚಿತ್ರದುರ್ಗದ ಕೋಳಿ ಕುಣಿತ ಮತ್ತು ಚಿಲಿಪಿಲಿ ಗೊಂಬೆ ಕುಣಿತ, ವಿಜಯನಗರದ ನಂದಿಕೋಲು ಕುಣಿತ, ಮಂಗಳೂರಿನ ಚಂಡಿಕಾವಾದ್ಯ, ಮಂಗಳೂರಿನ ಹುಲಿ ವೇಷ ಕುಣಿತ, ಕೊಣ್ಣೂರಿನ ಮಹಿಳಾ ಡೊಳ್ಳು ಕುಣಿತ, ಹಿರೂರಿನ ಕರಡಿ ಮಜಲು, ಸ್ಥಳೀಯ ಸನಾದಿ, ಬ್ಯಾಂಡ್‌ಸೆಟ್, ಕುದುರೆ ಕುಣಿತ, ಒಂಟೆ, ಹಲಗಿ ಮೇಳ, ಜೋಗತಿ ನೃತ್ಯ ಹಾಗೂ ಕಲಾ ತಂಡಗಳು ಹಾಗೂ ಕುಂಭ ಹೊತ್ತಿದ್ದ ನೂರಾರು ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದ್ದರು.

ಮೆರವಣಿಗೆಯಲ್ಲಿ ನಾಡಗೌಡ ಮನೆತನದ ಜೊತೆಗೆ ನಿಕಟ ಸಂಬಂಧ ಹೊಂದಿರುವ ವಿವಿಧ ಸೇವಾಕರ್ತರು, ಬಾಬುದಾರರು ಆಯುಧಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಹೊಸಮಠದಿಂದ ಆರಂಭಗೊಂಡ ಮೆರವಣಿಗೆ ಟಿಪ್ಪು ಸರ್ಕಲ್,ಸರಾಫ ಬಜಾರ ಮಾರ್ಗ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತ, ಗಣಪತಿ ದೇವಸ್ಥಾನ, ರಾಘವೇಂದ್ರ ಸ್ವಾಮಿಗಳ ಮಠ, ವಾಲ್ಮೀಕಿ ವೃತ್ತ, ಶಾರದಾ ದೇವಿ ಗುಡಿ, ಲಕ್ಷ್ಮಿ ವೆಂಕಟೇಶ್ವರ ಗುಡಿ ಮಾರ್ಗವಾಗಿ ದ್ಯಾಮವ್ವನ ಕಟ್ಟೆಗೆ ಸಾಗಿ ದೇವಿಯವರನ್ನು ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯಲ್ಲಿ ಜಾತ್ರಾ ಕಮೀಟಿಯ ಪದಾಧಿಕಾರಿಗಳು, ಊರಿನ ಗಣ್ಯರು, ಸಂಘ ಸಂಸ್ಥೆಯ ಮುಖಂಡರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು: ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಸೇರಿದಂತೆ ಹಲವು ಮುಸ್ಲಿಂ ಸಮಾಜದ ಮುಖಂಡರು ಗ್ರಾಮದೇವತೆ ಜಾತ್ರೆಯಲ್ಲಿ ಭಾಗಿಯಾಗಿದ್ದಲ್ಲದೇ ಚಿತ್ರದುರ್ಗದ ಚಂಡಿಕಾವಾದ್ಯ ವಾದನಕ್ಕೆ ಹೆಜ್ಜೆ ಹಾಕಿ ಕೋಮು ಸಾಮರಸ್ಯ ಮೆರೆದರು.

ಡಿಜೆ ಅಬ್ಬರದಲ್ಲಿ ಕುಂದಿದ ಸಾಂಪ್ರದಾಯಿಕ ವಾದನಗಳ ಮೆರಗು:
ಪಟ್ಟಣದ ಹೊಸಮಠದಿಂದ ಆರಂಭಗೊಂಡಿದ್ದ ಮೆರವಣಿಗೆಯಲ್ಲಿ ಚಿತ್ರದುರ್ಗ, ಚಿಕ್ಕಮಗಳೂರು, ವಿಜಯನಗರ, ಕೊಣ್ಣೂರು ಮೊದಲಾದ ದೂರದ ಊರುಗಳಿಂದ ಆಗಮಿಸಿದ್ದ ಸಾಂಪ್ರದಾಯಿಕ ವಾದನಗಳ ತಾಳವು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು. ಉತ್ಸಾಹದಿಂದಲೇ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಆಯಾ ವಾದನಗಳಿಗೆ ಹೆಜ್ಜೆ ಹಾಕುವುದು ಕಂಡು ಬಂದಿತು. ಹಳೇ ತಹಸೀಲ್ದಾರ್ ಕಚೇರಿ ಬಳಿ ಡಿಜೆ ಅಬ್ಬರದ ಸಪ್ಪಳದಲ್ಲಿ ಸಾಂಪ್ರದಾಯಿಕ ವಾದನಗಳ ಕಳೆ ಕುಂದುವಂತಾಯಿತು. ಡಿಜೆ ಸಂಗೀತಕ್ಕೆ ಯುವಕರು ಹುಚ್ಚೆದ್ದು ಕುಣಿದರು.

ಭಾರೀ ಪೊಲೀಸ್ ಭದ್ರತೆ: ಗ್ರಾಮದೇವತೆ ಜಾತ್ರೆಯ ಅಂಗವಾಗಿ ಸಿಪಿಐ ಮೊಹ್ಮದಫಸಿವುದ್ದೀನ ನೇತೃತ್ವದಲ್ಲಿ ಪಿಎಸ್‌ಐ ಸಂಜಯ ತಿಪರೆಡ್ಡಿ, ಸುರೇಶ ಮಂಟೂರ, ರಾಮನಗೌಡ ಸಂಕನಾಳ ಸೇರಿದಂತೆ ತಾಳಿಕೋಟಿ, ನಿಡಗುಂದಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ