Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್ 2025-26ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಮೀನುಗಾರಿಕಾ ಇಲಾಖೆಯ ನೂತನ ಕಚೇರಿಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮ್ಮಿಶ್ರ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ ಯುವಕರು ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸುವುದರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅವರಿಗೆ