Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಸಕ ಸಿ.ಎಸ್.ನಾಡಗೌಡರು ವಿಶೇಷ ಮುತುವರ್ಜಿ ವಹಿಸಿ ನಗರದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕಾರ್ಯದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಮುದ್ದೇಬಿಹಾಳ ಪಟ್ಟಣದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಸರ್ಕಾರಿ ಕೈಗಾರಿಕಾ ಹಾಗೂ ಉದ್ಯೋಗ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಗಂಗಮ್ಮ ಚಿನಿವಾರ ಅವರು ಬಂಥನಾಳ ಶಿವಯೋಗಿಗಳ ಮಾತಿನಿಂದ ಪ್ರೇರಿತರಾಗಿ ಶಿಕ್ಷಣಕ್ಕಾಗಿ ತಮ್ಮ ಇಡೀ ಆಸ್ತಿಯನ್ನು ದಾನ