Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್ ಕುಂಬಾರವಾಡಿ ಹಾಗೂ ಬಷಿರಅಹ್ಮದ್ ಕಡದರಾಳ ಅವರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಆರ್ಥಿಕ ನೆರವು ನೀಡಿದರು. ಇಬ್ಬರು ಸಂತ್ರಸ್ಥರ ಕುಟುಂಬಕ್ಕೆ ಭೇಟಿ ಮಾಡಿದ ಅಧ್ಯಕ್ಷ ಅಸ್ಕಿ ಅವರು ಸಾಂತ್ವನ ಹೇಳಿ ಒಂದು ಲಕ್ಷ ರೂ. ಧನ ಸಹಾಯ ಮಾಡಿದರು. ಈ ಸಮಯದಲ್ಲಿ ತಾಳಿಕೋಟಿ ಧಾರ್ಮಿಕ ಮುಖಂಡ ಸೈಯದ ಶಕೀಲಅಹ್ಮದ್ ಖಾಜಿ, ಗ್ಯಾರಂಟಿ ಸಮಿತಿ

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ವೇಳೆ ಅನುದಾನ ದುರುಪಯೋಗದ ಆರೋಪದ ಮೇಲೆ ಅಧಿಕಾರಿ ವಿಜಯಾ ಮುದಗಲ್ ಅವರನ್ನು ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ ಆದೇಶಿಸಿದ್ದಾರೆ. ಪ್ರಕರಣವೇನು : ಸನ್ 2019-20 ರಿಂದ 2021-22ನೇ ಅವಧಿಯ ಯರಝರಿ ಗ್ರಾಮ ಪಂಚಾಯಿತಿ ವಿಜಯಪುರ ಜಿಲ್ಲೆಯಲ್ಲಿ ಎಸ್.ಸಿ/ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಿರಿಸಿದ