Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ