Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಿಯಾರ್ ಅವರು ತಮ್ಮ ತಂದೆ ತಾಯಿ ಸ್ಮರಣಾರ್ಥ ಈ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ.ಆರ್ಥಿಕ ಸಬಲತೆ ಸಾಧಿಸಿದವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದರೆ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ