Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈಗಿರುವ ಸಮಯದ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಿಗ್ಗೆ 8 ರಿಂದ ಮದ್ಯಾಹ್ನ 1.30ಕ್ಕೆ ಬದಲಾಯಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ