Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ