Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ