Gurumahanth swamiji: Sattur Rajendra Guru who received Akshara Manath at the age of 12

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

ಹುನಗುಂದ: ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು ತಮ್ಮ 12 ನೇ ವಯಸ್ಸಿನಲ್ಲಿ ಉತ್ತರಾಧಿಕಾರಿಗಳಾಗಿ ಇಂದು ಮೈಸೂರು ಜಿಲ್ಲೆ ಮಾತ್ರವಲ್ಲದೇ ನಾಡಿನ ಬಡ ಮಕ್ಕಳಿಗೆ ಅನ್ನ, ವಸತಿ ನೀಡಿ ಅಕ್ಷರ ಹಣತೆ ಹಚ್ಚಿದ ಕೀರ್ತಿ ರಾಜೇಂದ್ರ ಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಇಲಕಲ್‌ನ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಶರಣ ಮಲ್ಲಣ್ಣ ಲೆಕ್ಕಿಹಾಳ ಅವರ ಮನೆಯಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರವಾರ ನಡೆದ ಸುತ್ತೂರ ರಾಜೇಂದ್ರ ಸ್ವಾಮಿಗಳ 109 ನೇ ಜನ್ಮ ದಿನೋತ್ಸವ ಹಾಗೂ 24ನೇ ಮನೆ ಮನಗಳಿಗೆ ವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜೇಂದ್ರ ಗುರುಗಳ ಜನ್ಮದಿನ ವನ್ನು ವಚನ ದಿನ ಎಂದು ಆಚರಸುತ್ತಿರುವದು ಬಸವಾದಿ ಶರಣರ ವಚನಗಳನ್ನು ನಾಡಿನ ಜನತೆಗೆ ತಲುಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದರು.

ಸಭೆಯಲ್ಲಿ ಅನುಭಾವ ನುಡಿಗಳನ್ನಾಡಿದ ವಿಜಯಪುರ ಜ್ಞಾನ ಯೋಗಾಶ್ರಮದ ಸಂಗಮೇಶ್ವರ ಸ್ವಾಮಿಗಳು ರಾಜೇಂದ್ರ ಗುರುಗಳ ಅಕ್ಷರ ದಾಸೋಹ,ಅನ್ನ ದಾಸೋಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಯ ಹರಿಕಾರರಾಗಿ
ಕಾರ್ಯ ಮಾಡಿದರು ಎಂದರು.

ಶರಣ ಸಾಯಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಸ್.ಎನ್. ಹಾದಿಮನಿ ಮಾತನಾಡಿ ರಾಜೇಂದ್ರ ಸ್ವಾಮಿಗಳು ಚಿಕ್ಕ ವಯಸ್ಸಿನಲ್ಲೇ ಸುತ್ತೂರ ಸಂಸ್ಥೆಯ ಬೆಳವಣಿಗೆ ಮಾಡುವ ಮೂಲಕ ಇಂದು ಈ ಸಂಸ್ಥೆ ಜಗತ್ತಿನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸವ ಮೂಲಕ ಅಕ್ಷರ ಕಾಯಕದ ಗುರುಗಳು ಎಂದು ಕರೆಸಿಕೊಂಡಿದ್ದಾರೆ ಎಂದರು.

ಶಿರೂರಿನ ಬಸವಲಿಂಗ ಸ್ವಾಮಿಗಳು ಮಾತನಾಡಿದರು.

ಸಭೆಯಲ್ಲಿ ಭಕ್ತಿಸೇವೆ ಮಾಡಿದ ಶರಣ ಮಲ್ಲಣ್ಣ ಲೆಕ್ಕಿಹಾಳ ದಂಪತಿಗಳನ್ನು ಗೌರವಿಸಿದರು.

ಸಭೆಯ ಪ್ರಾರಂಭದಲ್ಲಿ ಫ್ರಭುದೇವ ಮಾಲಗಿತ್ತಿಮಠ ವಚನ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕೊನೆಯಲ್ಲಿ ಶರಣು ಸಮರ್ಪಿಸಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಎಂ. ಎನ್ ತೆನಿಹಳ್ಳಿ,ಸಂಗಣ್ಣ ನಾಗರಾಳ, ಎಸ್.ಆರ್.ಕಡಿವಾಲ್, ಎಸ್.ಎಂ.ಕೊಪ್ಪರದ ಲೆಕ್ಕಿಹಾಳ ಬಂಧುಗಳು ಉಪಸ್ಥಿತರಿದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ