Gurumahanth swamiji: Sattur Rajendra Guru who received Akshara Manath at the age of 12

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

ಹುನಗುಂದ: ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು ತಮ್ಮ 12 ನೇ ವಯಸ್ಸಿನಲ್ಲಿ ಉತ್ತರಾಧಿಕಾರಿಗಳಾಗಿ ಇಂದು ಮೈಸೂರು ಜಿಲ್ಲೆ ಮಾತ್ರವಲ್ಲದೇ ನಾಡಿನ ಬಡ ಮಕ್ಕಳಿಗೆ ಅನ್ನ, ವಸತಿ ನೀಡಿ ಅಕ್ಷರ ಹಣತೆ ಹಚ್ಚಿದ ಕೀರ್ತಿ ರಾಜೇಂದ್ರ ಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಇಲಕಲ್‌ನ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಶರಣ ಮಲ್ಲಣ್ಣ ಲೆಕ್ಕಿಹಾಳ ಅವರ ಮನೆಯಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರವಾರ ನಡೆದ ಸುತ್ತೂರ ರಾಜೇಂದ್ರ ಸ್ವಾಮಿಗಳ 109 ನೇ ಜನ್ಮ ದಿನೋತ್ಸವ ಹಾಗೂ 24ನೇ ಮನೆ ಮನಗಳಿಗೆ ವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜೇಂದ್ರ ಗುರುಗಳ ಜನ್ಮದಿನ ವನ್ನು ವಚನ ದಿನ ಎಂದು ಆಚರಸುತ್ತಿರುವದು ಬಸವಾದಿ ಶರಣರ ವಚನಗಳನ್ನು ನಾಡಿನ ಜನತೆಗೆ ತಲುಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದರು.

ಸಭೆಯಲ್ಲಿ ಅನುಭಾವ ನುಡಿಗಳನ್ನಾಡಿದ ವಿಜಯಪುರ ಜ್ಞಾನ ಯೋಗಾಶ್ರಮದ ಸಂಗಮೇಶ್ವರ ಸ್ವಾಮಿಗಳು ರಾಜೇಂದ್ರ ಗುರುಗಳ ಅಕ್ಷರ ದಾಸೋಹ,ಅನ್ನ ದಾಸೋಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಯ ಹರಿಕಾರರಾಗಿ
ಕಾರ್ಯ ಮಾಡಿದರು ಎಂದರು.

ಶರಣ ಸಾಯಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಸ್.ಎನ್. ಹಾದಿಮನಿ ಮಾತನಾಡಿ ರಾಜೇಂದ್ರ ಸ್ವಾಮಿಗಳು ಚಿಕ್ಕ ವಯಸ್ಸಿನಲ್ಲೇ ಸುತ್ತೂರ ಸಂಸ್ಥೆಯ ಬೆಳವಣಿಗೆ ಮಾಡುವ ಮೂಲಕ ಇಂದು ಈ ಸಂಸ್ಥೆ ಜಗತ್ತಿನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸವ ಮೂಲಕ ಅಕ್ಷರ ಕಾಯಕದ ಗುರುಗಳು ಎಂದು ಕರೆಸಿಕೊಂಡಿದ್ದಾರೆ ಎಂದರು.

ಶಿರೂರಿನ ಬಸವಲಿಂಗ ಸ್ವಾಮಿಗಳು ಮಾತನಾಡಿದರು.

ಸಭೆಯಲ್ಲಿ ಭಕ್ತಿಸೇವೆ ಮಾಡಿದ ಶರಣ ಮಲ್ಲಣ್ಣ ಲೆಕ್ಕಿಹಾಳ ದಂಪತಿಗಳನ್ನು ಗೌರವಿಸಿದರು.

ಸಭೆಯ ಪ್ರಾರಂಭದಲ್ಲಿ ಫ್ರಭುದೇವ ಮಾಲಗಿತ್ತಿಮಠ ವಚನ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕೊನೆಯಲ್ಲಿ ಶರಣು ಸಮರ್ಪಿಸಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಎಂ. ಎನ್ ತೆನಿಹಳ್ಳಿ,ಸಂಗಣ್ಣ ನಾಗರಾಳ, ಎಸ್.ಆರ್.ಕಡಿವಾಲ್, ಎಸ್.ಎಂ.ಕೊಪ್ಪರದ ಲೆಕ್ಕಿಹಾಳ ಬಂಧುಗಳು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ