ಮದ್ಯಪ್ರಿಯರಿಗೆ ಬಿಗ್ ಶಾಕ್..! ಪ್ರತೀ ಬಾಟಲ್ ಗೆ ₹20 ಏರಿಕೆ

ಮದ್ಯಪ್ರಿಯರಿಗೆ ಬಿಗ್ ಶಾಕ್..! ಪ್ರತೀ ಬಾಟಲ್ ಗೆ ₹20 ಏರಿಕೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದ್ದು, ಪ್ರತಿ ಬಾಟಲ್ ಗೆ 5 -20 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ.

ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ ಬಾರಿಗೆ ಬಿಯರ್ ದರ ಹೆಚ್ಚಳವಾಗಿದೆ.

ಕೆಲವು ಕಂಪನಿಗಳ ಬಿಯರ್ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು, ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರ ಜಾರಿಯಾಗಲಿದೆ. ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ ಕನಿಷ್ಠ 5 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗುವಾಗುವುದು ಖಚಿತವಾಗಿದೆ.

ಸರ್ಕಾರ ಬಿಯರ್ ಮೇಲಿನ ತೆರಿಗೆಯನ್ನು ಕಳೆದ ಜುಲೈ 1 ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿದೆ. ಪ್ರತಿ ಬಾಟಲ್ ಬಿಯರ್ ಬೆಲೆ ಕನಿಷ್ಠ 10 ರೂಪಾಯಿ ಜಾಸ್ತಿಯಾಗಿತ್ತು. ನಂತರ ಬಿಯರ್ ಉತ್ಪಾದನಾ ಕಂಪನಿಗಳು ಕಚ್ಚಾ ಸಾಮಗ್ರಿ ದರ ಹೆಚ್ಚಳ ಕಾರಣ ನೀಡಿ ಪ್ರತಿ ಬಿಯರ್ ಬಾಟಲ್ ಮೇಲೆ ಕನಿಷ್ಠ 5 ರಿಂದ 20 ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಿವೆ.

ರಾಜ್ಯದಲ್ಲಿ ಹೆಚ್ಚಾಗಿ ಬಳಕೆಯಾಗುವ ಲೆಜೆಂಡ್, ಆರ್ಸಿ ಸ್ಟ್ರಾಂಗ್, ನಾಕೌಟ್, ಬುಲೆಟ್, ಪವರ್ ಕೂಲ್ ಸೇರಿ ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಏರಿಕೆಯಾಗಲಿದೆ ಎನ್ನಲಾಗಿದೆ.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್