ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಹಂಡೇಸಿರಿ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಪತ್ತಿನ ಲಭ್ಯತೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೆ ಪತ್ತಿನ ಸಹಕಾರ ಸಂಘಗಳ ಜೀವಂತಿಕೆ ಇರುತ್ತದೆ.ಜಾತ್ಯಾತೀತವಾಗಿ ಸದಸ್ಯರನ್ನು ಸೇರ್ಪಡೆಗೊಳಿಸಿದರೆ ಸಂಘ ಬೆಳವಣಿಗೆ ಸಾಧಿಸುತ್ತದೆ ಎಂದರು.

ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ, ಹಂಡೇಸಿರಿ ಸಹಕಾರ ಸಂಘದಿAದ ಜನರಿಗೆ ಸಾಲ ಸೌಲಭ್ಯಗಳು ದೊರೆತು ಬಡವರ ಅಭಿವೃದ್ಧಿಗೆ ಆದ್ಯತೆ ಸಿಗಲಿ ಎಂದರು.

ಹAಡೇಸಿರಿ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಹಂಡರಗಲ್ಲ ಮಾತನಾಡಿ, ಸಮಾನ ಮನಸ್ಕ ನೌಕರರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸೇರಿಸಿದ್ದ ಹಣವೇ ಇಂದು ಸಂಘ ಸ್ಥಾಪನೆಗೆ ಪ್ರೇರಣೆಯಾಗಿದೆ.ಗ್ರಾಹಕರ ವಿಶ್ವಾಸಗಳಿಸಿಕೊಂಡು ಸಂಘವನ್ನು ಮುನ್ನಡೆಸಲಾಗುವುದು ಎಂದರು. ಸೇರಿಕೊಂಡು ಆರಂಭಿಸಿದ ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ಕೊಡೇಕಲ್‌ದ ವೃಷಭೇಂದ್ರ ಸ್ವಾಮೀಜಿ,ಆರ್.ಎಸ್.ಬಿರಾದಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಆರ್.ಬಿ.ಪಾಟೀಲ,ಹಂಡೇಸಿರಿ ಸಹಕಾರ ಸಂಘದ ಉಪಾಧ್ಯಕ್ಷ ಪಿ.ಆರ್.ಕೂಡಗಿ, ಸಂಗಮೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿ ತೊಂಡಿಹಾಳ,ಹAಡೇವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ, ಮುಖಂಡರಾದ ಮಹ್ಮದರಫೀಕ ನಾಡಗೇರ,ಎಚ್.ಟಿ.ಬಿರಾದಾರ,ಮುದಕಪ್ಪಗೌಡ ತಂಗಡಗಿ,ಬಿ.ಆರ್.ರೂಡಗಿ , ನಿರ್ದೇಶಕರಾದ ಎಂ.ಬಿ.ಪಾಟೀಲ, ಎಂ.ಬಿ.ಬಿರಾದಾರ, ಬಿ.ಜಿ.ಬಿರಾದಾರ,ಎಸ್.ಟಿ.ಪಾಟೀಲ,ಆರ್.ಎಸ್.ಬಿರಾದಾರ,ಬಿ.ಎಚ್.ಭಗವತಿ,ಆರ್.ಬಿ.ಪಾಟೀಲ,ಬಿ.ಜಿ.ಬಿರಾದಾರ,ದ್ರಾಕ್ಷಾಯಣಿ ಗೌಡರ ಇದ್ದರು.ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ಆರ್.ಎಸ್.ಬಿರಾದಾರ ಸ್ವಾಗತಿಸಿದರು.ಸಿದ್ದನಗೌಡ ಕಾಶಿನಕುಂಟಿ ನಿರೂಪಿಸಿದರು.ರವಿ ಗೌಡರ ವಂದಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ