ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಹಂಡೇಸಿರಿ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಪತ್ತಿನ ಲಭ್ಯತೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೆ ಪತ್ತಿನ ಸಹಕಾರ ಸಂಘಗಳ ಜೀವಂತಿಕೆ ಇರುತ್ತದೆ.ಜಾತ್ಯಾತೀತವಾಗಿ ಸದಸ್ಯರನ್ನು ಸೇರ್ಪಡೆಗೊಳಿಸಿದರೆ ಸಂಘ ಬೆಳವಣಿಗೆ ಸಾಧಿಸುತ್ತದೆ ಎಂದರು.

ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ, ಹಂಡೇಸಿರಿ ಸಹಕಾರ ಸಂಘದಿAದ ಜನರಿಗೆ ಸಾಲ ಸೌಲಭ್ಯಗಳು ದೊರೆತು ಬಡವರ ಅಭಿವೃದ್ಧಿಗೆ ಆದ್ಯತೆ ಸಿಗಲಿ ಎಂದರು.

ಹAಡೇಸಿರಿ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಹಂಡರಗಲ್ಲ ಮಾತನಾಡಿ, ಸಮಾನ ಮನಸ್ಕ ನೌಕರರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸೇರಿಸಿದ್ದ ಹಣವೇ ಇಂದು ಸಂಘ ಸ್ಥಾಪನೆಗೆ ಪ್ರೇರಣೆಯಾಗಿದೆ.ಗ್ರಾಹಕರ ವಿಶ್ವಾಸಗಳಿಸಿಕೊಂಡು ಸಂಘವನ್ನು ಮುನ್ನಡೆಸಲಾಗುವುದು ಎಂದರು. ಸೇರಿಕೊಂಡು ಆರಂಭಿಸಿದ ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ಕೊಡೇಕಲ್‌ದ ವೃಷಭೇಂದ್ರ ಸ್ವಾಮೀಜಿ,ಆರ್.ಎಸ್.ಬಿರಾದಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಆರ್.ಬಿ.ಪಾಟೀಲ,ಹಂಡೇಸಿರಿ ಸಹಕಾರ ಸಂಘದ ಉಪಾಧ್ಯಕ್ಷ ಪಿ.ಆರ್.ಕೂಡಗಿ, ಸಂಗಮೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿ ತೊಂಡಿಹಾಳ,ಹAಡೇವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ, ಮುಖಂಡರಾದ ಮಹ್ಮದರಫೀಕ ನಾಡಗೇರ,ಎಚ್.ಟಿ.ಬಿರಾದಾರ,ಮುದಕಪ್ಪಗೌಡ ತಂಗಡಗಿ,ಬಿ.ಆರ್.ರೂಡಗಿ , ನಿರ್ದೇಶಕರಾದ ಎಂ.ಬಿ.ಪಾಟೀಲ, ಎಂ.ಬಿ.ಬಿರಾದಾರ, ಬಿ.ಜಿ.ಬಿರಾದಾರ,ಎಸ್.ಟಿ.ಪಾಟೀಲ,ಆರ್.ಎಸ್.ಬಿರಾದಾರ,ಬಿ.ಎಚ್.ಭಗವತಿ,ಆರ್.ಬಿ.ಪಾಟೀಲ,ಬಿ.ಜಿ.ಬಿರಾದಾರ,ದ್ರಾಕ್ಷಾಯಣಿ ಗೌಡರ ಇದ್ದರು.ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ಆರ್.ಎಸ್.ಬಿರಾದಾರ ಸ್ವಾಗತಿಸಿದರು.ಸಿದ್ದನಗೌಡ ಕಾಶಿನಕುಂಟಿ ನಿರೂಪಿಸಿದರು.ರವಿ ಗೌಡರ ವಂದಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,