Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಆಗಸ್ಟ್ ತಿಂಗಳಿನ ಸಂಭ್ರಮ (Celebration) ಶನಿವಾರದ ಚಟುವಟಿಕೆಗಳು ಜರುಗಿದವು.

ಮಕ್ಕಳ ವಿಶಿಷ್ಟ ಕೌಶಲ ಅಭಿವೃದ್ಧಿಗಾಗಿ ಅರಿವು ಅನುಭವ ಅವಲೋಕನಗಳ ಮೂಲಕ ಜ್ಞಾನ ಪಡೆಯುವುದು ಇದರ ಮೂಲ ಉದ್ದೇಶ. ಶಾಲೆಯ ಹೊರಗಿನ ಅನುಭವಗಳನ್ನು ಚಟುವಟಿಕೆ ಗಳ ಮೂಲಕ ಒದಗಿಸಲು ವೇದಿಕೆಯಾಗಿದೆ.

Join Out Telegram: https://t.me/dcgkannada

ಪ್ರತಿ ತಿಂಗಳ ಮೂರನೇ ಶನಿವಾರವನ್ನು ಬ್ಯಾಗ ರಹಿತ ದಿನ ಎಂದು ಆಚರಿಸಲು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಫಾರಸ್ಸು ಮಾಡಿದೆ. ವರ್ಷದಲ್ಲಿ ಹತ್ತು ದಿನ ವಿವಿಧ ವಿಷಯಗಳ ಮೇಲೆ ಮಕ್ಕಳಿಗಾಗಿಯೇ ಮಕ್ಕಳಿಂದ ಸನ್ನಿವೇಶ ಸೃಷ್ಟಿಸಿ ಕೌಶಲ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಇಲ್ಲಿ ನಡೆಯುತ್ತಿದೆ.

ಈ ತಿಂಗಳಿನ ಆಧುನಿಕ ತಂತ್ರಜ್ಞಾನ ಸಾಧನಗಳು ಮತ್ತು ಅಂತರ್ಜಾಲದ ಸುರಕ್ಷಿತ ಬಳಕೆ ವಿಷಯದ ಕುರಿತು ಚಟುವಟಿಕೆಗಳು ನಡೆದವು. ನಲಿ ಕಲಿ, ನಾಲ್ಕು ಮತ್ತು ಐದು ಹಾಗೂ ಆರು ಮತ್ತು ಏಳು ತರಗತಿಯ ಮಕ್ಕಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ನೀವೇನು ಬಲ್ಲಿರಿ? ಬನ್ನಿ ಚಿತ್ರ ಬಿಡಿಸೋಣ, ನಟಿಸು – ಕಲಿ ಚಟುವಟಿಕೆಗಳನ್ನು ನಿರ್ವಹಿಸಿದರು.

ಇದನ್ನೂ ಓದಿ: Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಮಕ್ಕಳು ಉತ್ತಮವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ, ಕೌಶಲವನ್ನು ಹಂಚಿಕೊಂಡರು. ಸಂಭ್ರಮ (Celebration) ಶನಿವಾರದ ವಿವಿಧ ಚಟುವಟಿಕೆಗಳ ಮೂಲಕ ಜ್ಞಾನವನ್ನು ಪಡೆದು, ಕಲಿಕೆ ಹಾಗೂ ಬದುಕಿನಲ್ಲಿ ಅನ್ವಯಿಸಿಕೊಳ್ಳಬೇಕು ಎಂದು ಮಾರ್ಗದರ್ಶಿ ಶಿಕ್ಷಕರು ಅಭಿಪ್ರಾಯಪಟ್ಟರು.

ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಮಾತೆ ವಿ ಬಿ ಕುಂಬಾರ, ಮಾರ್ಗದರ್ಶಿ ಶಿಕ್ಷಕರಾದ ಜ್ಯೋತಿ, ಜಿ ಆರ್ ನದಾಫ್, ಶಿವಾನಂದ ಬಿ, ಬಸವರಾಜ ಬಲಕುಂದಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿಕಪ್ಪರದ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ಕೊನೆಯಲ್ಲಿ ಕಾರ್ಯಕ್ರಮದ ಕುರಿತು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ