Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಆಗಸ್ಟ್ ತಿಂಗಳಿನ ಸಂಭ್ರಮ (Celebration) ಶನಿವಾರದ ಚಟುವಟಿಕೆಗಳು ಜರುಗಿದವು.

ಮಕ್ಕಳ ವಿಶಿಷ್ಟ ಕೌಶಲ ಅಭಿವೃದ್ಧಿಗಾಗಿ ಅರಿವು ಅನುಭವ ಅವಲೋಕನಗಳ ಮೂಲಕ ಜ್ಞಾನ ಪಡೆಯುವುದು ಇದರ ಮೂಲ ಉದ್ದೇಶ. ಶಾಲೆಯ ಹೊರಗಿನ ಅನುಭವಗಳನ್ನು ಚಟುವಟಿಕೆ ಗಳ ಮೂಲಕ ಒದಗಿಸಲು ವೇದಿಕೆಯಾಗಿದೆ.

Join Out Telegram: https://t.me/dcgkannada

ಪ್ರತಿ ತಿಂಗಳ ಮೂರನೇ ಶನಿವಾರವನ್ನು ಬ್ಯಾಗ ರಹಿತ ದಿನ ಎಂದು ಆಚರಿಸಲು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಫಾರಸ್ಸು ಮಾಡಿದೆ. ವರ್ಷದಲ್ಲಿ ಹತ್ತು ದಿನ ವಿವಿಧ ವಿಷಯಗಳ ಮೇಲೆ ಮಕ್ಕಳಿಗಾಗಿಯೇ ಮಕ್ಕಳಿಂದ ಸನ್ನಿವೇಶ ಸೃಷ್ಟಿಸಿ ಕೌಶಲ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಇಲ್ಲಿ ನಡೆಯುತ್ತಿದೆ.

ಈ ತಿಂಗಳಿನ ಆಧುನಿಕ ತಂತ್ರಜ್ಞಾನ ಸಾಧನಗಳು ಮತ್ತು ಅಂತರ್ಜಾಲದ ಸುರಕ್ಷಿತ ಬಳಕೆ ವಿಷಯದ ಕುರಿತು ಚಟುವಟಿಕೆಗಳು ನಡೆದವು. ನಲಿ ಕಲಿ, ನಾಲ್ಕು ಮತ್ತು ಐದು ಹಾಗೂ ಆರು ಮತ್ತು ಏಳು ತರಗತಿಯ ಮಕ್ಕಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ನೀವೇನು ಬಲ್ಲಿರಿ? ಬನ್ನಿ ಚಿತ್ರ ಬಿಡಿಸೋಣ, ನಟಿಸು – ಕಲಿ ಚಟುವಟಿಕೆಗಳನ್ನು ನಿರ್ವಹಿಸಿದರು.

ಇದನ್ನೂ ಓದಿ: Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಮಕ್ಕಳು ಉತ್ತಮವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ, ಕೌಶಲವನ್ನು ಹಂಚಿಕೊಂಡರು. ಸಂಭ್ರಮ (Celebration) ಶನಿವಾರದ ವಿವಿಧ ಚಟುವಟಿಕೆಗಳ ಮೂಲಕ ಜ್ಞಾನವನ್ನು ಪಡೆದು, ಕಲಿಕೆ ಹಾಗೂ ಬದುಕಿನಲ್ಲಿ ಅನ್ವಯಿಸಿಕೊಳ್ಳಬೇಕು ಎಂದು ಮಾರ್ಗದರ್ಶಿ ಶಿಕ್ಷಕರು ಅಭಿಪ್ರಾಯಪಟ್ಟರು.

ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಮಾತೆ ವಿ ಬಿ ಕುಂಬಾರ, ಮಾರ್ಗದರ್ಶಿ ಶಿಕ್ಷಕರಾದ ಜ್ಯೋತಿ, ಜಿ ಆರ್ ನದಾಫ್, ಶಿವಾನಂದ ಬಿ, ಬಸವರಾಜ ಬಲಕುಂದಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿಕಪ್ಪರದ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ಕೊನೆಯಲ್ಲಿ ಕಾರ್ಯಕ್ರಮದ ಕುರಿತು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Latest News

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಯಶಸ್ಸು ಸಾಧ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು. ಪಟ್ಟಣದ ವಿದ್ಯಾಚೇತನ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಸೂಕ್ತವಾದ ಪ್ರತಿಭೆಯನ್ನು ಗುರುತಿಸಿ ಪೂರಕವಾದ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಕರು ಮಗುವಿನ ಮೌಲ್ಯಮಾಪನ ಕಾರ್ಯ ನಿರಂತರ ಮಾಡಬೇಕು ಎಂದರು. ಕುAಟೋಜಿ