Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

Ad
Ad

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಆಗಸ್ಟ್ ತಿಂಗಳಿನ ಸಂಭ್ರಮ (Celebration) ಶನಿವಾರದ ಚಟುವಟಿಕೆಗಳು ಜರುಗಿದವು.

Ad
Ad

ಮಕ್ಕಳ ವಿಶಿಷ್ಟ ಕೌಶಲ ಅಭಿವೃದ್ಧಿಗಾಗಿ ಅರಿವು ಅನುಭವ ಅವಲೋಕನಗಳ ಮೂಲಕ ಜ್ಞಾನ ಪಡೆಯುವುದು ಇದರ ಮೂಲ ಉದ್ದೇಶ. ಶಾಲೆಯ ಹೊರಗಿನ ಅನುಭವಗಳನ್ನು ಚಟುವಟಿಕೆ ಗಳ ಮೂಲಕ ಒದಗಿಸಲು ವೇದಿಕೆಯಾಗಿದೆ.

Join Out Telegram: https://t.me/dcgkannada

ಪ್ರತಿ ತಿಂಗಳ ಮೂರನೇ ಶನಿವಾರವನ್ನು ಬ್ಯಾಗ ರಹಿತ ದಿನ ಎಂದು ಆಚರಿಸಲು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಫಾರಸ್ಸು ಮಾಡಿದೆ. ವರ್ಷದಲ್ಲಿ ಹತ್ತು ದಿನ ವಿವಿಧ ವಿಷಯಗಳ ಮೇಲೆ ಮಕ್ಕಳಿಗಾಗಿಯೇ ಮಕ್ಕಳಿಂದ ಸನ್ನಿವೇಶ ಸೃಷ್ಟಿಸಿ ಕೌಶಲ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಇಲ್ಲಿ ನಡೆಯುತ್ತಿದೆ.

ಈ ತಿಂಗಳಿನ ಆಧುನಿಕ ತಂತ್ರಜ್ಞಾನ ಸಾಧನಗಳು ಮತ್ತು ಅಂತರ್ಜಾಲದ ಸುರಕ್ಷಿತ ಬಳಕೆ ವಿಷಯದ ಕುರಿತು ಚಟುವಟಿಕೆಗಳು ನಡೆದವು. ನಲಿ ಕಲಿ, ನಾಲ್ಕು ಮತ್ತು ಐದು ಹಾಗೂ ಆರು ಮತ್ತು ಏಳು ತರಗತಿಯ ಮಕ್ಕಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ನೀವೇನು ಬಲ್ಲಿರಿ? ಬನ್ನಿ ಚಿತ್ರ ಬಿಡಿಸೋಣ, ನಟಿಸು – ಕಲಿ ಚಟುವಟಿಕೆಗಳನ್ನು ನಿರ್ವಹಿಸಿದರು.

ಇದನ್ನೂ ಓದಿ: Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಮಕ್ಕಳು ಉತ್ತಮವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ, ಕೌಶಲವನ್ನು ಹಂಚಿಕೊಂಡರು. ಸಂಭ್ರಮ (Celebration) ಶನಿವಾರದ ವಿವಿಧ ಚಟುವಟಿಕೆಗಳ ಮೂಲಕ ಜ್ಞಾನವನ್ನು ಪಡೆದು, ಕಲಿಕೆ ಹಾಗೂ ಬದುಕಿನಲ್ಲಿ ಅನ್ವಯಿಸಿಕೊಳ್ಳಬೇಕು ಎಂದು ಮಾರ್ಗದರ್ಶಿ ಶಿಕ್ಷಕರು ಅಭಿಪ್ರಾಯಪಟ್ಟರು.

ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಮಾತೆ ವಿ ಬಿ ಕುಂಬಾರ, ಮಾರ್ಗದರ್ಶಿ ಶಿಕ್ಷಕರಾದ ಜ್ಯೋತಿ, ಜಿ ಆರ್ ನದಾಫ್, ಶಿವಾನಂದ ಬಿ, ಬಸವರಾಜ ಬಲಕುಂದಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿಕಪ್ಪರದ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ಕೊನೆಯಲ್ಲಿ ಕಾರ್ಯಕ್ರಮದ ಕುರಿತು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500