Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಆಗಸ್ಟ್ ತಿಂಗಳಿನ ಸಂಭ್ರಮ (Celebration) ಶನಿವಾರದ ಚಟುವಟಿಕೆಗಳು ಜರುಗಿದವು.

ಮಕ್ಕಳ ವಿಶಿಷ್ಟ ಕೌಶಲ ಅಭಿವೃದ್ಧಿಗಾಗಿ ಅರಿವು ಅನುಭವ ಅವಲೋಕನಗಳ ಮೂಲಕ ಜ್ಞಾನ ಪಡೆಯುವುದು ಇದರ ಮೂಲ ಉದ್ದೇಶ. ಶಾಲೆಯ ಹೊರಗಿನ ಅನುಭವಗಳನ್ನು ಚಟುವಟಿಕೆ ಗಳ ಮೂಲಕ ಒದಗಿಸಲು ವೇದಿಕೆಯಾಗಿದೆ.

Join Out Telegram: https://t.me/dcgkannada

ಪ್ರತಿ ತಿಂಗಳ ಮೂರನೇ ಶನಿವಾರವನ್ನು ಬ್ಯಾಗ ರಹಿತ ದಿನ ಎಂದು ಆಚರಿಸಲು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಫಾರಸ್ಸು ಮಾಡಿದೆ. ವರ್ಷದಲ್ಲಿ ಹತ್ತು ದಿನ ವಿವಿಧ ವಿಷಯಗಳ ಮೇಲೆ ಮಕ್ಕಳಿಗಾಗಿಯೇ ಮಕ್ಕಳಿಂದ ಸನ್ನಿವೇಶ ಸೃಷ್ಟಿಸಿ ಕೌಶಲ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಇಲ್ಲಿ ನಡೆಯುತ್ತಿದೆ.

ಈ ತಿಂಗಳಿನ ಆಧುನಿಕ ತಂತ್ರಜ್ಞಾನ ಸಾಧನಗಳು ಮತ್ತು ಅಂತರ್ಜಾಲದ ಸುರಕ್ಷಿತ ಬಳಕೆ ವಿಷಯದ ಕುರಿತು ಚಟುವಟಿಕೆಗಳು ನಡೆದವು. ನಲಿ ಕಲಿ, ನಾಲ್ಕು ಮತ್ತು ಐದು ಹಾಗೂ ಆರು ಮತ್ತು ಏಳು ತರಗತಿಯ ಮಕ್ಕಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ನೀವೇನು ಬಲ್ಲಿರಿ? ಬನ್ನಿ ಚಿತ್ರ ಬಿಡಿಸೋಣ, ನಟಿಸು – ಕಲಿ ಚಟುವಟಿಕೆಗಳನ್ನು ನಿರ್ವಹಿಸಿದರು.

ಇದನ್ನೂ ಓದಿ: Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಮಕ್ಕಳು ಉತ್ತಮವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ, ಕೌಶಲವನ್ನು ಹಂಚಿಕೊಂಡರು. ಸಂಭ್ರಮ (Celebration) ಶನಿವಾರದ ವಿವಿಧ ಚಟುವಟಿಕೆಗಳ ಮೂಲಕ ಜ್ಞಾನವನ್ನು ಪಡೆದು, ಕಲಿಕೆ ಹಾಗೂ ಬದುಕಿನಲ್ಲಿ ಅನ್ವಯಿಸಿಕೊಳ್ಳಬೇಕು ಎಂದು ಮಾರ್ಗದರ್ಶಿ ಶಿಕ್ಷಕರು ಅಭಿಪ್ರಾಯಪಟ್ಟರು.

ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಮಾತೆ ವಿ ಬಿ ಕುಂಬಾರ, ಮಾರ್ಗದರ್ಶಿ ಶಿಕ್ಷಕರಾದ ಜ್ಯೋತಿ, ಜಿ ಆರ್ ನದಾಫ್, ಶಿವಾನಂದ ಬಿ, ಬಸವರಾಜ ಬಲಕುಂದಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿಕಪ್ಪರದ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ಕೊನೆಯಲ್ಲಿ ಕಾರ್ಯಕ್ರಮದ ಕುರಿತು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ