ಸೆ.26 ರಂದು ನಿಖಿಲ್ ಕುಮಾರಸ್ವಾಮಿ ಪ್ರವಾಸ: ಜೆಡಿಎಸ್ ಸದಸ್ಯತ್ವ ಅಭಿಯಾನ ಯಶಸ್ವಿಗೆ ಹವಾಲ್ದಾರ್ ಮನವಿ

ಸೆ.26 ರಂದು ನಿಖಿಲ್ ಕುಮಾರಸ್ವಾಮಿ ಪ್ರವಾಸ: ಜೆಡಿಎಸ್ ಸದಸ್ಯತ್ವ ಅಭಿಯಾನ ಯಶಸ್ವಿಗೆ ಹವಾಲ್ದಾರ್ ಮನವಿ

ಮುದ್ದೇಬಿಹಾಳ : ಜಾತ್ಯಾತೀತ ಜನತಾದಳದಿಂದ ಸದಸ್ಯತ್ವ ಅಭಿಯಾನ ಹಾಗೂ ಬೂತ್ ಮಟ್ಟದ ಸಮಿತಿಯ ಉದ್ಘಾಟನಾ ಕಾರ್ಯಕ್ರಮ ಸೆ.26 ರಂದು ಬೆಳಗ್ಗೆ 11ಕ್ಕೆ ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪವಾಡೆಪ್ಪ ಹವಾಲ್ದಾರ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭಿಯಾನದ ಉದ್ಘಾಟನೆಗೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕೋರ್‌ಕಮೀಟಿ ಅಧ್ಯಕ್ಷ,ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶಬಾಬು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪಕ್ಷ ಬೇರು ಮಟ್ಟದಿಂದ ಗಟ್ಟಿಯಾದರೆ ಮಾತ್ರ ಜೆಡಿಎಸ್ ಹೆಮ್ಮರವಾಗಿ ಬೆಳೆಯುತ್ತದೆ. ಎಲ್ಲ ಸಮುದಾಯಗಳ ಜನರನ್ನು ಒಳಗೊಂಡು ನೋಂದಣಿ ಮಾಡುವ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಿಸಿಕೊಳ್ಳಲು ಆಂತರಿಕವಾಗಿ ಸದಸ್ಯತ್ವ ಅಭಿಯಾನ ಚುರುಕುಗೊಳಿಸಲು ಹಾಗೂ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಲು ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿ ಹೊಸಬರನ್ನು ಪಕ್ಷಕ್ಕೆ ಕರೆತರುವ ಉದ್ದೇಶದಿಂದ ಪ್ರತಿ ಬೂತ್‌ನಲ್ಲಿ ಕನಿಷ್ಠ 10 ಪ್ರಾಮಾಣಿಕ ಸದಸ್ಯರನ್ನು ನೋಂದಣಿ ಮಾಡಿಸುವ ಪ್ರತಿಜ್ಞೆಯನ್ನು ಕಾರ್ಯಕರ್ತರು ಪಕ್ಷದ ವರಿಷ್ಠರ ಮುಂದೆ ಮಾಡಬೇಕು ಎಂದು ಹವಾಲ್ದಾರ್ ತಿಳಿಸಿದ್ದಾರೆ.

ಯಾರು ಪಕ್ಷದ ಪರವಾಗಿ ದುಡಿಯುತ್ತಾರೆ. ಮುಂದಿನ ಚುನಾವಣೆಯ ನಿಮ್ಮ ಟಿಕೆಟ್ ನಿಮ್ಮ ಮತಕ್ಷೇತ್ರದಲ್ಲಿ ಎಷ್ಟು ಜನರಿಗೆ ಸದಸ್ಯತ್ವದ ನೋಂದಣಿ ಮಾಡಿಸಿದ್ದಾರೆ ಎಂಬುದರ ಮೇಲೆ ನಿರ್ಧಾರವಾಗುವ ಸಾಧ್ಯತೆಗಳಿದ್ದು ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವಂತೆ ಅವರು ತಿಳಿಸಿದ್ದಾರೆ.

ಇದನ್ನು ಓದಿ: ಸಚಿವರ ಬಳಿ ನಿಯೋಗಕ್ಕೂ ಸಿದ್ಧ-ಸಿ.ಬಿ.ಅಸ್ಕಿ

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ