ಸೆ.26 ರಂದು ನಿಖಿಲ್ ಕುಮಾರಸ್ವಾಮಿ ಪ್ರವಾಸ: ಜೆಡಿಎಸ್ ಸದಸ್ಯತ್ವ ಅಭಿಯಾನ ಯಶಸ್ವಿಗೆ ಹವಾಲ್ದಾರ್ ಮನವಿ

ಸೆ.26 ರಂದು ನಿಖಿಲ್ ಕುಮಾರಸ್ವಾಮಿ ಪ್ರವಾಸ: ಜೆಡಿಎಸ್ ಸದಸ್ಯತ್ವ ಅಭಿಯಾನ ಯಶಸ್ವಿಗೆ ಹವಾಲ್ದಾರ್ ಮನವಿ

ಮುದ್ದೇಬಿಹಾಳ : ಜಾತ್ಯಾತೀತ ಜನತಾದಳದಿಂದ ಸದಸ್ಯತ್ವ ಅಭಿಯಾನ ಹಾಗೂ ಬೂತ್ ಮಟ್ಟದ ಸಮಿತಿಯ ಉದ್ಘಾಟನಾ ಕಾರ್ಯಕ್ರಮ ಸೆ.26 ರಂದು ಬೆಳಗ್ಗೆ 11ಕ್ಕೆ ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪವಾಡೆಪ್ಪ ಹವಾಲ್ದಾರ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭಿಯಾನದ ಉದ್ಘಾಟನೆಗೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕೋರ್‌ಕಮೀಟಿ ಅಧ್ಯಕ್ಷ,ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶಬಾಬು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪಕ್ಷ ಬೇರು ಮಟ್ಟದಿಂದ ಗಟ್ಟಿಯಾದರೆ ಮಾತ್ರ ಜೆಡಿಎಸ್ ಹೆಮ್ಮರವಾಗಿ ಬೆಳೆಯುತ್ತದೆ. ಎಲ್ಲ ಸಮುದಾಯಗಳ ಜನರನ್ನು ಒಳಗೊಂಡು ನೋಂದಣಿ ಮಾಡುವ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಿಸಿಕೊಳ್ಳಲು ಆಂತರಿಕವಾಗಿ ಸದಸ್ಯತ್ವ ಅಭಿಯಾನ ಚುರುಕುಗೊಳಿಸಲು ಹಾಗೂ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಲು ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿ ಹೊಸಬರನ್ನು ಪಕ್ಷಕ್ಕೆ ಕರೆತರುವ ಉದ್ದೇಶದಿಂದ ಪ್ರತಿ ಬೂತ್‌ನಲ್ಲಿ ಕನಿಷ್ಠ 10 ಪ್ರಾಮಾಣಿಕ ಸದಸ್ಯರನ್ನು ನೋಂದಣಿ ಮಾಡಿಸುವ ಪ್ರತಿಜ್ಞೆಯನ್ನು ಕಾರ್ಯಕರ್ತರು ಪಕ್ಷದ ವರಿಷ್ಠರ ಮುಂದೆ ಮಾಡಬೇಕು ಎಂದು ಹವಾಲ್ದಾರ್ ತಿಳಿಸಿದ್ದಾರೆ.

ಯಾರು ಪಕ್ಷದ ಪರವಾಗಿ ದುಡಿಯುತ್ತಾರೆ. ಮುಂದಿನ ಚುನಾವಣೆಯ ನಿಮ್ಮ ಟಿಕೆಟ್ ನಿಮ್ಮ ಮತಕ್ಷೇತ್ರದಲ್ಲಿ ಎಷ್ಟು ಜನರಿಗೆ ಸದಸ್ಯತ್ವದ ನೋಂದಣಿ ಮಾಡಿಸಿದ್ದಾರೆ ಎಂಬುದರ ಮೇಲೆ ನಿರ್ಧಾರವಾಗುವ ಸಾಧ್ಯತೆಗಳಿದ್ದು ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವಂತೆ ಅವರು ತಿಳಿಸಿದ್ದಾರೆ.

ಇದನ್ನು ಓದಿ: ಸಚಿವರ ಬಳಿ ನಿಯೋಗಕ್ಕೂ ಸಿದ್ಧ-ಸಿ.ಬಿ.ಅಸ್ಕಿ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ