ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಮುದ್ದೇಬಿಹಾಳ : ಕುಂಟೋಜಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅವರ ಮನೆಗೆ ಸ್ಥಳೀಯವಾಗಿ ಇದ್ದರೂ ನೊಂದಿರುವ ರೈತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳದ ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆಯೇ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು.

ಸಾಲದ ಬಾಧೆ ತಾಳದೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ(ಬೊಮ್ಮಣಗಿ)ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗ ಅವರು ಮಾತನಾಡಿದರು.ಈ ಸರ್ಕಾರದಲ್ಲಿ ಅಧಿಕಾರಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.ರೈತ ಆತ್ಮಹತ್ಯೆ ವಿಷಯ ತಿಳಿದ ತಕ್ಷಣ ತಹಶೀಲ್ದಾರ್‌ರು, ಪಿಎಸ್‌ಐ,ಕೃಷಿ ಇಲಾಖೆ ಅಧಿಕಾರಿ ಭೇಟಿ ನೀಡಿ ವರದಿ ನೀಡಬೇಕು.ಆದರೆ ಈವರೆಗೂ ಅಧಿಕಾರಿಗಳು ಭೇಟಿ ನೀಡದೆ ಇರುವುದು ಈ ಕ್ಷೇತ್ರದ ದುರಂತ ಎಂದರು.

ನಾನಿಲ್ಲಿ ರಾಜಕಾರಣ ಮಾಡುವುದಕ್ಕೆ ಬಂದಿಲ್ಲ.ರೈತ ಆತ್ಮಹತ್ಯೆ ಮಾಡಿಕೊಂಡಾಗ ಕನಿಷ್ಠ ಪಕ್ಷ ಅವರ ಮನೆಗೆ ತೆರಳಿ ಸಾಂತ್ವನ ಹೇಳುವ ಕೆಲಸ ಮಾಡಿ ಸರ್ಕಾರದಿಂದ ಬರುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರೆ ಅವರಿಗೆ ಧೈರ್ಯ ಬರುತ್ತಿತ್ತು.ಆದರೆ ಇಂತಹ ಕೆಲಸ ಮಾಡದೇ ಇರುವ ಜನಪ್ರತಿನಿಧಿ ಇರುವುದು ಜನತೆಯ ದುರ್ದೈವ.ಜನತೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತನ ಹೆಸರಲ್ಲಿ 6.50 ಲಕ್ಷ ರೂ.ಸಾಲ ವಿವಿಧ ಬ್ಯಾಂಕುಗಳಲ್ಲಿದೆ.ಅತಿವೃಷ್ಟಿಯಿAದ ಬೆಳೆದಿದ್ದ ಬೆಳೆ ಫಸಲು ಕೈಗೆ ಬಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರೈತರು ದುಡುಕಿನ ನಿರ್ಧಾರ ತಗೆದುಕೊಳ್ಳಬಾರದು ಎಂದು ನಡಹಳ್ಳಿ ಹೇಳಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗ ಸುಲ್ಲಳ್ಳಿ, ಮಾಜಿ ಸೈನಿಕ ನಾಗಲಿಂಗಯ್ಯ ಮಠ, ವಕೀಲ ಪಿ.ಎಲ್.ಬೊಮ್ಮಣಗಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಂ.ಎಸ್.ಕನ್ನೂರ,ರೈತನ ಪತ್ನಿ ಬೋರಮ್ಮ ಗೌಡರ,ಮೃತ ರೈತನ ಮಕ್ಕಳು ಇದ್ದರು.

ರೈತನ ಒಬ್ಬ ಮಗಳಿಗೆ ವಿವಾಹ ನಿಶ್ಚಯವಾಗಿದ್ದು ಮದುವೆಯ ಸಮಯದಲ್ಲಿ ನೆರವು ನೀಡುವುದಾಗಿ ತಿಳಿಸಿದರು.ಆತ್ಮಹತ್ಯೆಗೆ ಶರಣಾದ ರೈತನ ಮಕ್ಕಳಿಗೆ ಶಿಕ್ಷಣ ಉಚಿತವಾಗಿ ನೀಡಬೇಕು.ಪತ್ನಿಗೆ ಮಾಶಾಸನ ನೀಡಬೇಕು.ರೈತನಿಗೆ ತ್ವರಿತವಾಗಿ ಪರಿಹಾರ ದೊರಕದೆ ಇದ್ದಲ್ಲಿ ನಾನು ಹೋರಾಟದ ದಾರಿv ತುಳಿಯಬೇಕಾಗುತ್ತದೆ.ಇದಕ್ಕೆ ಆಸ್ಪದ ಮಾಡಿಕೊಡಬೇಡಿ.
–ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ