ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಮುದ್ದೇಬಿಹಾಳ : ಕುಂಟೋಜಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅವರ ಮನೆಗೆ ಸ್ಥಳೀಯವಾಗಿ ಇದ್ದರೂ ನೊಂದಿರುವ ರೈತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳದ ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆಯೇ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು.

ಸಾಲದ ಬಾಧೆ ತಾಳದೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ(ಬೊಮ್ಮಣಗಿ)ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗ ಅವರು ಮಾತನಾಡಿದರು.ಈ ಸರ್ಕಾರದಲ್ಲಿ ಅಧಿಕಾರಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.ರೈತ ಆತ್ಮಹತ್ಯೆ ವಿಷಯ ತಿಳಿದ ತಕ್ಷಣ ತಹಶೀಲ್ದಾರ್‌ರು, ಪಿಎಸ್‌ಐ,ಕೃಷಿ ಇಲಾಖೆ ಅಧಿಕಾರಿ ಭೇಟಿ ನೀಡಿ ವರದಿ ನೀಡಬೇಕು.ಆದರೆ ಈವರೆಗೂ ಅಧಿಕಾರಿಗಳು ಭೇಟಿ ನೀಡದೆ ಇರುವುದು ಈ ಕ್ಷೇತ್ರದ ದುರಂತ ಎಂದರು.

ನಾನಿಲ್ಲಿ ರಾಜಕಾರಣ ಮಾಡುವುದಕ್ಕೆ ಬಂದಿಲ್ಲ.ರೈತ ಆತ್ಮಹತ್ಯೆ ಮಾಡಿಕೊಂಡಾಗ ಕನಿಷ್ಠ ಪಕ್ಷ ಅವರ ಮನೆಗೆ ತೆರಳಿ ಸಾಂತ್ವನ ಹೇಳುವ ಕೆಲಸ ಮಾಡಿ ಸರ್ಕಾರದಿಂದ ಬರುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರೆ ಅವರಿಗೆ ಧೈರ್ಯ ಬರುತ್ತಿತ್ತು.ಆದರೆ ಇಂತಹ ಕೆಲಸ ಮಾಡದೇ ಇರುವ ಜನಪ್ರತಿನಿಧಿ ಇರುವುದು ಜನತೆಯ ದುರ್ದೈವ.ಜನತೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತನ ಹೆಸರಲ್ಲಿ 6.50 ಲಕ್ಷ ರೂ.ಸಾಲ ವಿವಿಧ ಬ್ಯಾಂಕುಗಳಲ್ಲಿದೆ.ಅತಿವೃಷ್ಟಿಯಿAದ ಬೆಳೆದಿದ್ದ ಬೆಳೆ ಫಸಲು ಕೈಗೆ ಬಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರೈತರು ದುಡುಕಿನ ನಿರ್ಧಾರ ತಗೆದುಕೊಳ್ಳಬಾರದು ಎಂದು ನಡಹಳ್ಳಿ ಹೇಳಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗ ಸುಲ್ಲಳ್ಳಿ, ಮಾಜಿ ಸೈನಿಕ ನಾಗಲಿಂಗಯ್ಯ ಮಠ, ವಕೀಲ ಪಿ.ಎಲ್.ಬೊಮ್ಮಣಗಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಂ.ಎಸ್.ಕನ್ನೂರ,ರೈತನ ಪತ್ನಿ ಬೋರಮ್ಮ ಗೌಡರ,ಮೃತ ರೈತನ ಮಕ್ಕಳು ಇದ್ದರು.

ರೈತನ ಒಬ್ಬ ಮಗಳಿಗೆ ವಿವಾಹ ನಿಶ್ಚಯವಾಗಿದ್ದು ಮದುವೆಯ ಸಮಯದಲ್ಲಿ ನೆರವು ನೀಡುವುದಾಗಿ ತಿಳಿಸಿದರು.ಆತ್ಮಹತ್ಯೆಗೆ ಶರಣಾದ ರೈತನ ಮಕ್ಕಳಿಗೆ ಶಿಕ್ಷಣ ಉಚಿತವಾಗಿ ನೀಡಬೇಕು.ಪತ್ನಿಗೆ ಮಾಶಾಸನ ನೀಡಬೇಕು.ರೈತನಿಗೆ ತ್ವರಿತವಾಗಿ ಪರಿಹಾರ ದೊರಕದೆ ಇದ್ದಲ್ಲಿ ನಾನು ಹೋರಾಟದ ದಾರಿv ತುಳಿಯಬೇಕಾಗುತ್ತದೆ.ಇದಕ್ಕೆ ಆಸ್ಪದ ಮಾಡಿಕೊಡಬೇಡಿ.
–ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು