ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಮುದ್ದೇಬಿಹಾಳ : ಕುಂಟೋಜಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅವರ ಮನೆಗೆ ಸ್ಥಳೀಯವಾಗಿ ಇದ್ದರೂ ನೊಂದಿರುವ ರೈತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳದ ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆಯೇ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು.

ಸಾಲದ ಬಾಧೆ ತಾಳದೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ(ಬೊಮ್ಮಣಗಿ)ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗ ಅವರು ಮಾತನಾಡಿದರು.ಈ ಸರ್ಕಾರದಲ್ಲಿ ಅಧಿಕಾರಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.ರೈತ ಆತ್ಮಹತ್ಯೆ ವಿಷಯ ತಿಳಿದ ತಕ್ಷಣ ತಹಶೀಲ್ದಾರ್‌ರು, ಪಿಎಸ್‌ಐ,ಕೃಷಿ ಇಲಾಖೆ ಅಧಿಕಾರಿ ಭೇಟಿ ನೀಡಿ ವರದಿ ನೀಡಬೇಕು.ಆದರೆ ಈವರೆಗೂ ಅಧಿಕಾರಿಗಳು ಭೇಟಿ ನೀಡದೆ ಇರುವುದು ಈ ಕ್ಷೇತ್ರದ ದುರಂತ ಎಂದರು.

ನಾನಿಲ್ಲಿ ರಾಜಕಾರಣ ಮಾಡುವುದಕ್ಕೆ ಬಂದಿಲ್ಲ.ರೈತ ಆತ್ಮಹತ್ಯೆ ಮಾಡಿಕೊಂಡಾಗ ಕನಿಷ್ಠ ಪಕ್ಷ ಅವರ ಮನೆಗೆ ತೆರಳಿ ಸಾಂತ್ವನ ಹೇಳುವ ಕೆಲಸ ಮಾಡಿ ಸರ್ಕಾರದಿಂದ ಬರುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರೆ ಅವರಿಗೆ ಧೈರ್ಯ ಬರುತ್ತಿತ್ತು.ಆದರೆ ಇಂತಹ ಕೆಲಸ ಮಾಡದೇ ಇರುವ ಜನಪ್ರತಿನಿಧಿ ಇರುವುದು ಜನತೆಯ ದುರ್ದೈವ.ಜನತೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತನ ಹೆಸರಲ್ಲಿ 6.50 ಲಕ್ಷ ರೂ.ಸಾಲ ವಿವಿಧ ಬ್ಯಾಂಕುಗಳಲ್ಲಿದೆ.ಅತಿವೃಷ್ಟಿಯಿAದ ಬೆಳೆದಿದ್ದ ಬೆಳೆ ಫಸಲು ಕೈಗೆ ಬಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರೈತರು ದುಡುಕಿನ ನಿರ್ಧಾರ ತಗೆದುಕೊಳ್ಳಬಾರದು ಎಂದು ನಡಹಳ್ಳಿ ಹೇಳಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗ ಸುಲ್ಲಳ್ಳಿ, ಮಾಜಿ ಸೈನಿಕ ನಾಗಲಿಂಗಯ್ಯ ಮಠ, ವಕೀಲ ಪಿ.ಎಲ್.ಬೊಮ್ಮಣಗಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಂ.ಎಸ್.ಕನ್ನೂರ,ರೈತನ ಪತ್ನಿ ಬೋರಮ್ಮ ಗೌಡರ,ಮೃತ ರೈತನ ಮಕ್ಕಳು ಇದ್ದರು.

ರೈತನ ಒಬ್ಬ ಮಗಳಿಗೆ ವಿವಾಹ ನಿಶ್ಚಯವಾಗಿದ್ದು ಮದುವೆಯ ಸಮಯದಲ್ಲಿ ನೆರವು ನೀಡುವುದಾಗಿ ತಿಳಿಸಿದರು.ಆತ್ಮಹತ್ಯೆಗೆ ಶರಣಾದ ರೈತನ ಮಕ್ಕಳಿಗೆ ಶಿಕ್ಷಣ ಉಚಿತವಾಗಿ ನೀಡಬೇಕು.ಪತ್ನಿಗೆ ಮಾಶಾಸನ ನೀಡಬೇಕು.ರೈತನಿಗೆ ತ್ವರಿತವಾಗಿ ಪರಿಹಾರ ದೊರಕದೆ ಇದ್ದಲ್ಲಿ ನಾನು ಹೋರಾಟದ ದಾರಿv ತುಳಿಯಬೇಕಾಗುತ್ತದೆ.ಇದಕ್ಕೆ ಆಸ್ಪದ ಮಾಡಿಕೊಡಬೇಡಿ.
–ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ