HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ಬೆನಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮುನ್ನ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ? ಬಿಜೆಪಿಯವರು ನಡೆದುಕೊಂಡ ರೀತಿ ನನ್ನ ಮನಸ್ಸಿಗೆ ನೋವಾಗಿದೆ.

ಪಾದಯಾತ್ರೆ ಮುಖ್ಯಸ್ಥರನ್ನಾಗಿ ಯಾರನ್ನ ಮಾಡಿದ್ದಾರೆ? ಯಾರು ಈ ಪ್ರೀತಂಗೌಡ? ದೇವೇಗೌಡರ ಕುಟುಂಬವನ್ನ ಸರ್ವನಾಶ ಮಾಡಲು ಹೊರಟಿದ್ದವ. ಅವನನ್ನು ಸಭೆಗೆ ಕರಿತಾರೆ, ಅದಕ್ಕೆ ನನ್ನನ್ನೂ ಕರೀತಾರೆ, ನನಗೂ ಸಹಿಸೋಕೆ ಇತಿ ಮಿತಿ ಇದೆ ಎಂದು ಮಿತ್ರ ಪಕ್ಷ ಬಿಜೆಪಿಯ ಮುಖಂಡರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.

ಪೆನ್‌ಡ್ರೈವ್‌ ಬೀದೀಲಿ ಹಂಚೋಕೆ ಯಾರು ಕಾರಣ ಎಂದು ಬಿಜೆಪಿಗರಿಗೆ ಪ್ರಶ್ನಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನನ್ನ ಕುಟುಂಬಕ್ಕೆ ವಿಷ ಹಾಕಿದವರನ್ನ ನನ್ನ ಜೊತೇಲಿ ಕೂರಿಸ್ತಾರೆ. ಈಗ ಪಾದಯಾತ್ರೆಗೆ ನಮ್ಮ ಬೆಂಬಲ ಕೇಳ್ತಾರಾ? ಎಂದು ಹರಿಹಾಯ್ದರು.

ಯಾವುದೋ ಒಂದು ಪ್ರಕರಣ ಇಟ್ಕೊಂಡು ಪಾದಯಾತ್ರೆ ಮಾಡೋದು ಎಷ್ಚು ಸರಿ? ಜನರ ಭಾವನೆ, ನೋವಿಗೆ ಸ್ಪಂದಿಸಬೇಕಾಗಿದೆ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ ಎಂದು ಬಿಜೆಪಿ ಆಯೋಜಿಸಿರುವ ಪಾದಯಾತ್ರೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್​​​ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಮತ್ತೊಂದೆಡೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಪಾದಯಾತ್ರೆಗೆ ಅಪಸ್ವರ ತೆಗೆದಿದ್ದು, ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಪ್ರರ್ಯಾಯ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದ್ದು, ಕೂಡಲಸಂಗಮ ಅಥವಾ ಹುಬ್ಬಳ್ಳಿಯಿಂದ ಬಳ್ಳಾರಿಯವರೆಗೆ ಹೆಜ್ಜೆ ಹಾಕಲು ಸಮಾಲೋಚನೆ ನಡೆಸುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೆ, ವಿಜಯೇಂದ್ರ ಅವರು ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಭೇಟಿ ಕುರಿತು ಟ್ವಿಟ್ ಮಾಡಿರುವ ವಿಜಯೇಂದ್ರ, ನವದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾಅವರನ್ನು ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳ ಕುರಿತು ಚರ್ಚಿಸಲಾಯಿತು.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ವಿವರಗಳನ್ನು ನೀಡಲಾಯಿತು.

ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ ನಿರ್ವಹಿಸುತ್ತಿರುವ ರೀತಿ-ನೀತಿಗಳ ಕುರಿತು ಮೆಚ್ಚುಗೆ ಸೂಚಿಸಿದರು.

ಪಕ್ಷ ಬಲವೃದ್ಧಿಗೆ ಪ್ರೇರಣೆ ತುಂಬುವ ಚೈತನ್ಯಶೀಲ ವ್ಯಕ್ತಿತ್ವದ ಅಮಿತ್ ಶಾ ಅವರ ಇಂದಿನ ಭೇಟಿ ನನ್ನಲ್ಲಿ ಅದಮ್ಯ ಉತ್ಸಾಹ ತುಂಬಿದೆ ಎಂದು ಬರೆದುಕೊಂಡಿದ್ದು, ಕುಮಾರಸ್ವಾಮಿ ಮುನಿಸು, ಯತ್ನಾಳ್ ಇಕ್ಕಟ್ಟಿನ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ