HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ಬೆನಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮುನ್ನ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ? ಬಿಜೆಪಿಯವರು ನಡೆದುಕೊಂಡ ರೀತಿ ನನ್ನ ಮನಸ್ಸಿಗೆ ನೋವಾಗಿದೆ.

ಪಾದಯಾತ್ರೆ ಮುಖ್ಯಸ್ಥರನ್ನಾಗಿ ಯಾರನ್ನ ಮಾಡಿದ್ದಾರೆ? ಯಾರು ಈ ಪ್ರೀತಂಗೌಡ? ದೇವೇಗೌಡರ ಕುಟುಂಬವನ್ನ ಸರ್ವನಾಶ ಮಾಡಲು ಹೊರಟಿದ್ದವ. ಅವನನ್ನು ಸಭೆಗೆ ಕರಿತಾರೆ, ಅದಕ್ಕೆ ನನ್ನನ್ನೂ ಕರೀತಾರೆ, ನನಗೂ ಸಹಿಸೋಕೆ ಇತಿ ಮಿತಿ ಇದೆ ಎಂದು ಮಿತ್ರ ಪಕ್ಷ ಬಿಜೆಪಿಯ ಮುಖಂಡರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.

ಪೆನ್‌ಡ್ರೈವ್‌ ಬೀದೀಲಿ ಹಂಚೋಕೆ ಯಾರು ಕಾರಣ ಎಂದು ಬಿಜೆಪಿಗರಿಗೆ ಪ್ರಶ್ನಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನನ್ನ ಕುಟುಂಬಕ್ಕೆ ವಿಷ ಹಾಕಿದವರನ್ನ ನನ್ನ ಜೊತೇಲಿ ಕೂರಿಸ್ತಾರೆ. ಈಗ ಪಾದಯಾತ್ರೆಗೆ ನಮ್ಮ ಬೆಂಬಲ ಕೇಳ್ತಾರಾ? ಎಂದು ಹರಿಹಾಯ್ದರು.

ಯಾವುದೋ ಒಂದು ಪ್ರಕರಣ ಇಟ್ಕೊಂಡು ಪಾದಯಾತ್ರೆ ಮಾಡೋದು ಎಷ್ಚು ಸರಿ? ಜನರ ಭಾವನೆ, ನೋವಿಗೆ ಸ್ಪಂದಿಸಬೇಕಾಗಿದೆ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ ಎಂದು ಬಿಜೆಪಿ ಆಯೋಜಿಸಿರುವ ಪಾದಯಾತ್ರೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್​​​ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಮತ್ತೊಂದೆಡೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಪಾದಯಾತ್ರೆಗೆ ಅಪಸ್ವರ ತೆಗೆದಿದ್ದು, ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಪ್ರರ್ಯಾಯ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದ್ದು, ಕೂಡಲಸಂಗಮ ಅಥವಾ ಹುಬ್ಬಳ್ಳಿಯಿಂದ ಬಳ್ಳಾರಿಯವರೆಗೆ ಹೆಜ್ಜೆ ಹಾಕಲು ಸಮಾಲೋಚನೆ ನಡೆಸುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೆ, ವಿಜಯೇಂದ್ರ ಅವರು ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಭೇಟಿ ಕುರಿತು ಟ್ವಿಟ್ ಮಾಡಿರುವ ವಿಜಯೇಂದ್ರ, ನವದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾಅವರನ್ನು ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳ ಕುರಿತು ಚರ್ಚಿಸಲಾಯಿತು.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ವಿವರಗಳನ್ನು ನೀಡಲಾಯಿತು.

ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ ನಿರ್ವಹಿಸುತ್ತಿರುವ ರೀತಿ-ನೀತಿಗಳ ಕುರಿತು ಮೆಚ್ಚುಗೆ ಸೂಚಿಸಿದರು.

ಪಕ್ಷ ಬಲವೃದ್ಧಿಗೆ ಪ್ರೇರಣೆ ತುಂಬುವ ಚೈತನ್ಯಶೀಲ ವ್ಯಕ್ತಿತ್ವದ ಅಮಿತ್ ಶಾ ಅವರ ಇಂದಿನ ಭೇಟಿ ನನ್ನಲ್ಲಿ ಅದಮ್ಯ ಉತ್ಸಾಹ ತುಂಬಿದೆ ಎಂದು ಬರೆದುಕೊಂಡಿದ್ದು, ಕುಮಾರಸ್ವಾಮಿ ಮುನಿಸು, ಯತ್ನಾಳ್ ಇಕ್ಕಟ್ಟಿನ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ