ದಲಿತರಿಗೆ ಸೇರಬೇಕಾದ 68 ಎಕರೆ DK ಶಿವಕುಮಾರ್ ಲಪಟಾಯಿಸಿದ್ದಾರೆ: HDK ಗಂಭೀರ ಆರೋಪ

ದಲಿತರಿಗೆ ಸೇರಬೇಕಾದ 68 ಎಕರೆ DK ಶಿವಕುಮಾರ್ ಲಪಟಾಯಿಸಿದ್ದಾರೆ: HDK ಗಂಭೀರ ಆರೋಪ

ರಾಮನಗರ: ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು.

ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು ಅವರು, ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದರು.

ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಹೆಚ್ಡಿಕೆ ಡಿಸಿಎಂ ಡಿಕೆಶಿಗೆ ನೇರ ಸವಾಲು ಹಾಕಿದರು.

ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆಡಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಹೇಳಿದರು ಕುಮಾರಸ್ವಾಮಿ ಅವರು.

ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ‌-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೇಯದಾಗಬೇಕು. ನಾನು ಅಧಿಕಾರ ಕೇಳಿ ನಿಮ್ಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದಿರಿ ಶಿವಕುಮಾರ್. ನೀವು ಮರೆತು ಹೋಗಿದ್ದೀರಿ, ಒಮ್ಮೆ ನೆನಪುವಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಟಾಂಗ್ ಕೊಟ್ಟರು.

ಡಾ.ಮಂಜುನಾಥ್ ಅವರು ಡಾಕ್ಟರ್ ಕೆಲಸ ಮಾತ್ರ ಮಾಡ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರಿಯುತ್ತಿದೆ. ಅವರ ಬಗ್ಗೆಯೂ ಶಿವಕುಮಾರ್ ಮಾತಾಡಿದ್ದಾರೆ. ಅವರ ಹತಾಶೆ, ನಿರಾಶೆ ನನಗೆ ಅರ್ಥ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಗೃಹ ಸಚಿವರಾಗಿ ಒಬ್ಬ ದಲಿತ ಪೊಲೀಸ್ ಅಧಿಕಾರಿ ರಕ್ಷಣೆ ಮಾಡಲು ಪರಮೇಶ್ವರ್ ಅವರಿಂದ ಆಗಲಿಲ್ಲ. ಅಲ್ಲಿಗೆ ಅವರು ಇಪ್ಪತ್ತು ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಂಡಿದ್ದಾರೆ. ಈಗ ಅವರು ಅಲ್ಲೇ ಉಳಿಯಲು ಮೂವತ್ತು ಲಕ್ಷ ಕೊಡಬೇಕಂತೆ. ಒಬ್ಬ ಪೋಲಿಸ್ ಅಧಿಕಾರಿಯನ್ನೇ ರಕ್ಷಣೆ ಮಾಡಲಾಗದ ಈ ಸರ್ಕಾರಕ್ಕೆ ಜನರ ರಕ್ಷಣೆ ಮಾಡಲು ಸಾಧ್ಯವೇ? ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದರು.

ರಾಜಕೀಯ ನಿವೃತ್ತಿಯ ಸವಾಲು ಹಾಕಿದ HDK: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ‌ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಬಿಡಿಸಿದರು ಕೇಂದ್ರ ಸಚಿವ ಕುಮಾರಸ್ವಾಮಿ ಅವರು.

ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ‌ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಸರ್ಕಾರದ ಬಗ್ಗೆ ನಮಗೆ ಅಸೂಯೆ ಇಲ್ಲ: ‌ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೀತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ