HDK vs Siddaramaiah: Union Minister HD Kumaraswamy arrested?

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (HDK vs Siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

Join Our Telegram: https://t.me/dcgkannada

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು. (HDK vs Siddaramaiah)

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು ಕೊಲೆಗೈದು ಶವವನ್ನು ಕೃಷ್ಣಾ ನದಿಗೆ ಎಸೆಯಲು ಮುಂದಾಗಿದ್ದ ವೇಳೆ ಸಾರ್ವಜನಿಕರನ್ನು ಕಂಡು ಶವ ಅಲ್ಲಿಯೇ ಬಿಟ್ಟು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ ತಾಲ್ಲೂಕಿನ ತಂಗಡಗಿ ಕೃಷ್ಣಾ ನದಿ ಬಳಿ ಮೇ.13 ರಂದು ಮಧ್ಯರಾತ್ರಿ ಜರುಗಿದೆ. ಘಟನೆ ವಿವರ : ಮೂಲತಃ ತೇರದಾಳದ ಸದ್ಯಕ್ಕೆ ಹುನಗುಂದ ತಾಲ್ಲೂಕು ಮರೋಳದಲ್ಲಿ ವಾಸಿಸುತ್ತಿದ್ದ ಸಮ್ಮೇದ ವಿಜಯ ಸಾಬಣ್ಣವರ ಹಾಗೂ ಸವದತ್ತಿ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಜಿ.ನಾಗರಾಳ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಭುನಾಥ ಕಂಚ್ಯಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಸಿ.ಜಿ.ನಾಗರಾಳ ಅವರ ಹೆಸರನ್ನು ಸಂಗಣ್ಣ ಕಂಚ್ಯಾಣಿ ಸೂಚಿಸಿದರು.ಮುದ್ದೇಬಿಹಾಳ ತಾಲೂಕಾ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅಶೋಕ ಮಣಿ ಅನುಮೋದಿಸಿದರು.ಅಧಿಕಾರ ವಹಿಸಿಕೊಂಡು ಶಸಾಪ ನೂತನ